ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು.
ಷಷ್ಠಿಯ ದಿನದಂದು ಮುಂಜಾನೆ 3ರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಲಿವೆ. ಅಭಿಷೇಕ ಕಾರ್ಯಗಳು ಪ್ರಾರಂಭಗೊಂಡು, 5:30ಕ್ಕೆ ಮಹಾಮಂಗಳಾರತಿ ನೆರವೇರಿತು. ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾಯಿತು. ರಾತ್ರಿ 8:30ರವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ದೊರೆಯಲಿದೆ.
ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಚಿನ್ನಾಭರಣ ಕಳವು ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
ಪಾರ್ಕಿಂಗ್ ವ್ಯವಸ್ಥೆ
ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್ ಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪೊಲೀಸ್ ಭದ್ರತೆ
ಘಾಟಿ ಬ್ರಹ್ಮರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು, ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ವ್ಯವಸ್ಥೆ ಮಾಡಲಾಗಿತ್ತು.
ಸಾರಿಗೆ ವ್ಯವಸ್ಥೆ
ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಅದೇರೀತಿ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವನ್ನ ಸಹ ಕಲ್ಪಿಸಲಾಗಿತ್ತು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…