ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ವೈಭವದ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು ಪುನೀತರಾದ ಭಕ್ತಸಾಗರ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ‌ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು.

ಮುಜರಾಯಿ ಇಲಾಖಾ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ರಥೋತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತಗಣ ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದು, ರಥವನ್ನ ಎಳೆದು, ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಭಕ್ತಿ ಇಚ್ಚಾನುಸಾರ ಸಮರ್ಪಿಸಿ ಪುನೀತರಾದರು.

ಷಷ್ಠಿಯ ದಿನದಂದು ಮುಂಜಾನೆ 3ರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಲಿವೆ. ಅಭಿಷೇಕ ಕಾರ್ಯಗಳು ಪ್ರಾರಂಭಗೊಂಡು, 5:30ಕ್ಕೆ ಮಹಾಮಂಗಳಾರತಿ ನೆರವೇರಿತು. ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾಯಿತು. ರಾತ್ರಿ 8:30ರವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ದೊರೆಯಲಿದೆ.

ಭಕ್ತರಿಗೆ ಅನ್ನ ದಾಸೋಹ, ಮಜ್ಜಿಗೆ, ಪಾನಕದ ವ್ಯವಸ್ಥೆ ಮಾಡಲಾಗಿತ್ತು. ಜಾತ್ರೆಗೆ ಆಗಮಿಸುವ ಭಕ್ತರಿಗೆ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್‌ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ‌ ಮಾಡಲಾಗಿದೆ. ಚಿನ್ನಾಭರಣ ಕಳವು ಸೇರಿದಂತೆ ಯಾವು‌ದೇ‌ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್‌ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ಪಾರ್ಕಿಂಗ್ ವ್ಯವಸ್ಥೆ

ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್‌ ಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪೊಲೀಸ್ ಭದ್ರತೆ

ಘಾಟಿ ಬ್ರಹ್ಮರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು, ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ವ್ಯವಸ್ಥೆ ಮಾಡಲಾಗಿತ್ತು.

ಸಾರಿಗೆ ವ್ಯವಸ್ಥೆ

ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಅದೇರೀತಿ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವನ್ನ ಸಹ ಕಲ್ಪಿಸಲಾಗಿತ್ತು.

Ramesh Babu

Journalist

Recent Posts

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

4 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

16 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

19 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

20 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

22 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

23 hours ago