ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ವೈಭವದ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು ಪುನೀತರಾದ ಭಕ್ತಸಾಗರ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ‌ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು.

ಮುಜರಾಯಿ ಇಲಾಖಾ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ರಥೋತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತಗಣ ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದು, ರಥವನ್ನ ಎಳೆದು, ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಭಕ್ತಿ ಇಚ್ಚಾನುಸಾರ ಸಮರ್ಪಿಸಿ ಪುನೀತರಾದರು.

ಷಷ್ಠಿಯ ದಿನದಂದು ಮುಂಜಾನೆ 3ರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಲಿವೆ. ಅಭಿಷೇಕ ಕಾರ್ಯಗಳು ಪ್ರಾರಂಭಗೊಂಡು, 5:30ಕ್ಕೆ ಮಹಾಮಂಗಳಾರತಿ ನೆರವೇರಿತು. ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾಯಿತು. ರಾತ್ರಿ 8:30ರವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ದೊರೆಯಲಿದೆ.

ಭಕ್ತರಿಗೆ ಅನ್ನ ದಾಸೋಹ, ಮಜ್ಜಿಗೆ, ಪಾನಕದ ವ್ಯವಸ್ಥೆ ಮಾಡಲಾಗಿತ್ತು. ಜಾತ್ರೆಗೆ ಆಗಮಿಸುವ ಭಕ್ತರಿಗೆ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್‌ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ‌ ಮಾಡಲಾಗಿದೆ. ಚಿನ್ನಾಭರಣ ಕಳವು ಸೇರಿದಂತೆ ಯಾವು‌ದೇ‌ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್‌ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ಪಾರ್ಕಿಂಗ್ ವ್ಯವಸ್ಥೆ

ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್‌ ಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪೊಲೀಸ್ ಭದ್ರತೆ

ಘಾಟಿ ಬ್ರಹ್ಮರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು, ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ವ್ಯವಸ್ಥೆ ಮಾಡಲಾಗಿತ್ತು.

ಸಾರಿಗೆ ವ್ಯವಸ್ಥೆ

ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಅದೇರೀತಿ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವನ್ನ ಸಹ ಕಲ್ಪಿಸಲಾಗಿತ್ತು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago