ಶ್ರೀ ಘಾಟಿ ಸುಬ್ರ‌‌ಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಸಂಪನ್ನ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರ‌‌ಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಹಿನ್ನೆಲೆ ದೇವಾಲಯವನ್ನು ವಿವಿಧ ಪುಷ್ಪಗಳು, ತಳಿರು ತೋರಣಗಳಿಂದ ಅಲಂಕರಿಸಿ ವಿಶೇಷ ಪೂಜೆ, ಪುನಸ್ಕಾರ ನಡೆಸಲಾಯಿತು.

ಇಂದು ಮುಂಜಾನೆ 5:00 ಗಂಟೆಗೆ ಅಭಿಷೇಕ ಮತ್ತು ಮಹಾ ಮಂಗಳಾರತಿ ಹಾಗೂ ವಿಶೇಷ ಅಲಂಕಾರ ಮಾಡಲಾಯಿತು. ದೇವರ ದರ್ಶನಕ್ಕೆಂದು ಸಾವಿರಾರು ಭಕ್ತರು ಆಗಮಿಸಿದ್ದರು. ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನಕ್ಕೆ ಬಂದ ಭಕ್ತಾದಿಗಳು ನಾಗರಕಲ್ಲಿಗೆ ಹಾಗೂ ಹುತ್ತಕ್ಕೆ ಹಾಲು ಮೊಸರು ತುಪ್ಪವನ್ನು ಹಾಕಿ ತಮ್ಮ ಹರಕೆಯನ್ನು ತೀರಿಸಿಕೊಂಡರು.

ಚಂಪಾ ಷಷ್ಠಿಯು ಈಶ್ವರ ಮತ್ತು ಸುಬ್ರಹ್ಮಣ್ಯನನ್ನು ಪೂಜಿಸುವ ಉತ್ಸವವಾಗಿರುತ್ತದೆ. ಈ ಉತ್ಸವ ಮಾರ್ಗಶಿರ ಮಾಸದ ಶುಕ್ಲಪಕ್ಷದಂದು ನಡೆಯುತ್ತದೆ. ಈ ಹಬ್ಬದ ಆಚರಣೆಯ ಮುಖ್ಯ ಉದ್ದೇಶ ಸಂತೋಷ, ನೆಮ್ಮದಿ , ಸುಖ, ಶಾಂತಿ ಆರೋಗ್ಯ, ಧನ್ಯಾತ್ಮಕ ಭಾವನೆಗಳು ಮನದಲ್ಲಿ ಉಂಟುಮಾಡಲಿವೆ ಎಂಬ ನಂಬಿಕೆ ಇದೆ.

ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.

Ramesh Babu

Journalist

Recent Posts

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

2 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

20 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

21 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

21 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

21 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

24 hours ago