ನಗರದ ತೇರಿನ ಬೀದಿಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಎರಡು ಬೆಳ್ಳಿ ಕಿರೀಟ, ಹಾಗೂ ಒಂದು ಚಿನ್ನದ ತಾಳಿಯನ್ನು ಕದ್ದೊಯ್ದ ಕಳ್ಳರು.
ಸೋಮವಾರ ರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದ್ದು, ಇದಕ್ಕೂ ಮುನ್ನ ನಗರದ ಇತಿಹಾಸ ಪ್ರಸಿದ್ಧ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಬೀಗ ಮುರಿದು ಕಳ್ಳತನ ಪ್ರಯತ್ನ ಮಾಡಿದ್ದಾರೆ. ಆದರೆ ಅದು ವಿಫಲವಾಗಿದೆ.
ನಂತರ ಪಕ್ಕದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು, ಎರಡು ಬೆಳ್ಳಿ ಕಿರೀಟ ಮತ್ತು ಸುಮಾರು 16 ಸಾವಿರ ಮೌಲ್ಯದ ಚಿನ್ನದ ತಾಳಿಯನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…