ಶ್ರೀ ದೇವರಾಜ ಅರಸ್ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ

ಸ್ನಾತಕ, ಸ್ನಾತಕೋತ್ತರ ಪದವಿಗಳು ಮುಖ್ಯ ಅಲ್ಲ ಜೀವನದಲ್ಲಿ ಸಂಸ್ಕಾರ ಮುಖ್ಯ ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ಏನಾಗಬೇಕೆಂದು ಯೋಚಿಸಬೇಕು. ಅಂತೆಯೇ ಹೆತ್ತವರೂ ತಮ್ಮ ಮಕ್ಕಳು ಹೇಗೆ ಬೆಳೆಯಬೇಕು ಎಂಬುದರ ಬಗ್ಗೆ ಆಲೋಚನೆ ಮಾಡಬೇಕು. ಹಾಗಾದಾಗ ಉತ್ತಮ ಮಾರ್ಗವನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ ಎಂದು ಸರ್ಕಾರಿ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಜಿ.ಶ್ರೀನಿವಾಸ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾ ವಿದ್ಯಾಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಮೊಬೈಲ್ ಬಳಸುವುದನ್ನು ಕಡಿಮೆ ಮಾಡಿ ಪುಸ್ತಕ ಓದುವುದನ್ನು ರೂಡಿಸಿಕೊಳ್ಳಬೇಕು ಎಂದರು.

ಹೆಚ್ಚು ಹೆಚ್ಚು ಪಠ್ಯೇತರ ಸಂಗತಿಗಳನ್ನೂ ತಿಳಿದುಕೊಳ್ಳುತ್ತಾ ವ್ಯಕ್ತಿತ್ವವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು ಎಂದರು.

ಶ್ರೀ ದೇವರಾಜ ಅರಸು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಮಾತನಾಡಿ ವಿದ್ಯಾರ್ಥಿಗಳು ಕಲಿಯುವ ಸಂದರ್ಭದಲ್ಲಿ ತಮ್ಮ ಗಮನ ಎಲ್ಲಾ ಕಡೆ ಇರಬೇಕು, ಕೇವಲ ಒಂದಕ್ಕೆ ಸೀಮಿತಗೊಳ್ಳಬಾರದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ಕೃಷ್ಟ ದೇಶಪ್ರೇಮಿಯಾಗಬೇಕು ಮೊಬೈಲ್ ಮತ್ತು ವಾಹನಗಳ ಆಕರ್ಷಣೆಯಿಂದ ಬದುಕುನ್ನು ಹಾಳು ಮಾಡಿಕೊಳ್ಳಬಾರದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಎಂ.ಕಾಂ ಆರಂಭಿಸಲಾಗಿದೆ. ವರ್ಷದಿಂದ ವರ್ಷಕ್ಕೆ ಕಾಲೇಜು ವಿಸ್ತೃತಗೊಳ್ಳುತ್ತಿದೆ. ವಿದ್ಯಾರ್ಥಿಗಳನ್ನು ಪರಿಪೂರ್ಣತೆಯೆಡೆಗೆ ಕರೆದೊಯ್ಯುವ ಎಲ್ಲಾ ಪ್ರಯತ್ನಗಳೂ ಜಾರಿಯಲ್ಲಿವೆ, ವಿದ್ಯಾರ್ಥಿಗಳು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಯುವ ಮನಸ್ಸುಗಳು ಅರ್ಥ ಮಾಡಿಕೊಂಡು ಪಾಠ ಪ್ರವಚನಗಳ ಕಡೆ ಗಮನ ಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

1 minute ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

2 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

14 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

14 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

17 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

19 hours ago