ಶ್ರೀ ದೇವರಾಜ ಅರಸ್ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ

ಸ್ನಾತಕ, ಸ್ನಾತಕೋತ್ತರ ಪದವಿಗಳು ಮುಖ್ಯ ಅಲ್ಲ ಜೀವನದಲ್ಲಿ ಸಂಸ್ಕಾರ ಮುಖ್ಯ ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ಏನಾಗಬೇಕೆಂದು ಯೋಚಿಸಬೇಕು. ಅಂತೆಯೇ ಹೆತ್ತವರೂ ತಮ್ಮ ಮಕ್ಕಳು ಹೇಗೆ ಬೆಳೆಯಬೇಕು ಎಂಬುದರ ಬಗ್ಗೆ ಆಲೋಚನೆ ಮಾಡಬೇಕು. ಹಾಗಾದಾಗ ಉತ್ತಮ ಮಾರ್ಗವನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ ಎಂದು ಸರ್ಕಾರಿ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಜಿ.ಶ್ರೀನಿವಾಸ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾ ವಿದ್ಯಾಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಮೊಬೈಲ್ ಬಳಸುವುದನ್ನು ಕಡಿಮೆ ಮಾಡಿ ಪುಸ್ತಕ ಓದುವುದನ್ನು ರೂಡಿಸಿಕೊಳ್ಳಬೇಕು ಎಂದರು.

ಹೆಚ್ಚು ಹೆಚ್ಚು ಪಠ್ಯೇತರ ಸಂಗತಿಗಳನ್ನೂ ತಿಳಿದುಕೊಳ್ಳುತ್ತಾ ವ್ಯಕ್ತಿತ್ವವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು ಎಂದರು.

ಶ್ರೀ ದೇವರಾಜ ಅರಸು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಮಾತನಾಡಿ ವಿದ್ಯಾರ್ಥಿಗಳು ಕಲಿಯುವ ಸಂದರ್ಭದಲ್ಲಿ ತಮ್ಮ ಗಮನ ಎಲ್ಲಾ ಕಡೆ ಇರಬೇಕು, ಕೇವಲ ಒಂದಕ್ಕೆ ಸೀಮಿತಗೊಳ್ಳಬಾರದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ಕೃಷ್ಟ ದೇಶಪ್ರೇಮಿಯಾಗಬೇಕು ಮೊಬೈಲ್ ಮತ್ತು ವಾಹನಗಳ ಆಕರ್ಷಣೆಯಿಂದ ಬದುಕುನ್ನು ಹಾಳು ಮಾಡಿಕೊಳ್ಳಬಾರದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಎಂ.ಕಾಂ ಆರಂಭಿಸಲಾಗಿದೆ. ವರ್ಷದಿಂದ ವರ್ಷಕ್ಕೆ ಕಾಲೇಜು ವಿಸ್ತೃತಗೊಳ್ಳುತ್ತಿದೆ. ವಿದ್ಯಾರ್ಥಿಗಳನ್ನು ಪರಿಪೂರ್ಣತೆಯೆಡೆಗೆ ಕರೆದೊಯ್ಯುವ ಎಲ್ಲಾ ಪ್ರಯತ್ನಗಳೂ ಜಾರಿಯಲ್ಲಿವೆ, ವಿದ್ಯಾರ್ಥಿಗಳು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಯುವ ಮನಸ್ಸುಗಳು ಅರ್ಥ ಮಾಡಿಕೊಂಡು ಪಾಠ ಪ್ರವಚನಗಳ ಕಡೆ ಗಮನ ಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

8 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

12 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago