ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರಾ ನಾಟಕೋತ್ಸವ ಸಮಾರೋಪ ಸಮಾರಂಭ

ಇಂದಿನ ಆಧುನಿಕ ಯುಗಕ್ಕೆ ತಕ್ಕಂತೆ ಹವ್ಯಾಸಿ ಹಾಗೂ ವೃತ್ತಿ ರಂಗಭೂಮಿ ಹೊಸ ಸ್ವರೂಪ ಹಾಗೂ ರಂಗ ಸಜ್ಜಿಕೆಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎಂ.ಎಸ್.ಗುಣಶೀಲನ್ ಹೇಳಿದರು.

ನಗರದ ಸರ್.ಎಂ.ವಿಶ್ವೇಶ್ವರಯ್ಯ ವೃತ್ತದಲ್ಲಿ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರಾ ಸಾಂಸ್ಕೃತಿಕ ಸಮಿತಿ, ತಾಲೂಕು ಕಲಾವಿದರ ಸಂಘ, ನಗರಸಭೆ, ಕನ್ನಡ ಜಾಗೃತ ಪರಿಷತ್ತು ಹಾಗೂ ಅನಿಕೇತನ ಟ್ರಸ್ಟ್ ಸಹಯೋಗದೊಂದಿಗೆ ನಡೆದ ನಾಟಕೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಅಸಂಖ್ಯಾತ ಕಲಾವಿದರಿದ್ದು, ರಂಗ ಕಲೆಗಳಲ್ಲಿ ನಿರತರಾಗಿದ್ದಾರೆ. ಈಗ ಹವ್ಯಾಸಿ ರಂಗಭೂಮಿ ಹೊಸ ಆಯಾಮಗಳ ಮೂಲಕ ಪ್ರೇಕ್ಷಕರಿಗೆ ತಲುಪುತ್ತಿರುವುದು ಉತ್ತಮ ಬೆಳವಣಿಗೆ. ದೊಡ್ಡಬಳ್ಳಾಪುರದಲ್ಲಿ ನಟಗಂಗೋತ್ರಿ ಮೊದಲಾದ ನಾಟಕ ತಂಡಗಳು ಸಾಮಾಜಿಕ, ಐತಿಹಾಸಿಕ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಮನ್ನಣೆ ಗಳಿಸಿದ್ದವು.

ಈ ತಂಡದಲ್ಲಿ ಅಭಿನಯಿಸಿದ ಬಹಳಷ್ಟು ಮಂದಿ ಉತ್ತಮ ಕಲಾವಿದರಾಗಿ ರೂಪುಗೊಂಡಿದ್ದಾರೆ. ನಾಟಕ ಕಲೆಗೆ ಇಲ್ಲಿನ ಸಹೃದಯರು ನೀಡುತ್ತಿರುವ ಉತ್ತೇಜನ ಸದಾ ಸ್ಮರಣೀಯವಾಗಿದೆ. ರಂಗಕಲೆಗೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ನಗರದ ಡಾ.ರಾಜ್‍ಕುಮಾರ್ ಕಲಾಭವನವನ್ನು ಆಧುನೀಕರಣಗೊಳಿಸಬೇಕಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಮಾತನಾಡಿ, ಮಾಧ್ಯಮಗಳ ಪ್ರಭಾವದಿಂದಾಗಿ ಇಂದು ರಂಗಕಲೆ ನೇಪಥ್ಯಕ್ಕೆ ಸರಿಯುತ್ತಿರುವ ಇಂದಿನ ಸಂದರ್ಭದಲ್ಲಿ ನಾಟಕ ಕಲೆಯನ್ನು ಉತ್ತೇಜಿಸಲು ನಾಟಕೋತ್ಸವ ಕಾರ್ಯಕ್ರಮಗಳು ಇಂಬು ನೀಡುತ್ತಿವೆ ಎಂದರು.

ಕಾರ್ಯಕ್ರಮದ ಅಂಗವಾಗಿ, ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದಿಂದ ರಂಗ ಗೀತೆಗಳು ಹಾಗೂ ಗೀತ ಗಾಯನ, ವಿ.ವೆಂಕಟೇಶ್ ಅವರಿಂದ ಮಾತನಾಡುವ ಗೊಂಬೆ ಪ್ರದರ್ಶನ,ಶ್ರೀ ರಾಘವೇಂದ್ರ ಸಾಂಸ್ಕøತಿಕ ಯೋಗ ಕೇಂದ್ರ, ನಟಗಂಗೋತ್ರಿ ವತಿಯಿಂದ ಸಿನಿ ಮಹಾತ್ಮೆ ಹಾಸ್ಯ ಸಾಮಾಜಿಕ ನಾಟಕ ಪ್ರದರ್ಶನ ಹಾಗೂ ರಾತ್ರಿ ಶ್ರೀ ಹುತ್ತದ ಮಹಾಗಣಪತಿ ಕೃಪಾ ಪೆÇೀಷಿತ ನಾಟಕ ಮಂಡಲಿ (ಭುವನೇಶ್ವರಿ ನಗರ) ವತಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

ಸಮಾರಂಭದಲ್ಲಿ ತಾಲೂಕಿನ ಹಿರಿಯ ಕಲಾವಿದರಾದ ನಾರಾಯಣಪ್ಪ ಹಳೇಕೋಟೆ, ಎನ್.ರಾಮಾಂಜಿನಪ್ಪ, ಬಿ.ಚಂದ್ರಶೇಖರ್, ಜಿ.ಎ.ನಂಜೇಗೌಡ, ರಾಮಣ್ಣ ಕಾರನಾಳ, ಓಬಮ್ಮ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಬಿಜೆಪಿ.ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟ ಸಂಚಾಲಕರಾದ ಧಿರಜ್ ಮುನಿರಾಜು, ನಗರಸಭಾ ಸದಸ್ಯರಾದ ಎಸ್.ವತ್ಸಲಾ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

3 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

4 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

6 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

11 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

16 hours ago