ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರಾ ನಾಟಕೋತ್ಸವ ಸಮಾರೋಪ ಸಮಾರಂಭ

ಇಂದಿನ ಆಧುನಿಕ ಯುಗಕ್ಕೆ ತಕ್ಕಂತೆ ಹವ್ಯಾಸಿ ಹಾಗೂ ವೃತ್ತಿ ರಂಗಭೂಮಿ ಹೊಸ ಸ್ವರೂಪ ಹಾಗೂ ರಂಗ ಸಜ್ಜಿಕೆಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎಂ.ಎಸ್.ಗುಣಶೀಲನ್ ಹೇಳಿದರು.

ನಗರದ ಸರ್.ಎಂ.ವಿಶ್ವೇಶ್ವರಯ್ಯ ವೃತ್ತದಲ್ಲಿ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರಾ ಸಾಂಸ್ಕೃತಿಕ ಸಮಿತಿ, ತಾಲೂಕು ಕಲಾವಿದರ ಸಂಘ, ನಗರಸಭೆ, ಕನ್ನಡ ಜಾಗೃತ ಪರಿಷತ್ತು ಹಾಗೂ ಅನಿಕೇತನ ಟ್ರಸ್ಟ್ ಸಹಯೋಗದೊಂದಿಗೆ ನಡೆದ ನಾಟಕೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಅಸಂಖ್ಯಾತ ಕಲಾವಿದರಿದ್ದು, ರಂಗ ಕಲೆಗಳಲ್ಲಿ ನಿರತರಾಗಿದ್ದಾರೆ. ಈಗ ಹವ್ಯಾಸಿ ರಂಗಭೂಮಿ ಹೊಸ ಆಯಾಮಗಳ ಮೂಲಕ ಪ್ರೇಕ್ಷಕರಿಗೆ ತಲುಪುತ್ತಿರುವುದು ಉತ್ತಮ ಬೆಳವಣಿಗೆ. ದೊಡ್ಡಬಳ್ಳಾಪುರದಲ್ಲಿ ನಟಗಂಗೋತ್ರಿ ಮೊದಲಾದ ನಾಟಕ ತಂಡಗಳು ಸಾಮಾಜಿಕ, ಐತಿಹಾಸಿಕ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಮನ್ನಣೆ ಗಳಿಸಿದ್ದವು.

ಈ ತಂಡದಲ್ಲಿ ಅಭಿನಯಿಸಿದ ಬಹಳಷ್ಟು ಮಂದಿ ಉತ್ತಮ ಕಲಾವಿದರಾಗಿ ರೂಪುಗೊಂಡಿದ್ದಾರೆ. ನಾಟಕ ಕಲೆಗೆ ಇಲ್ಲಿನ ಸಹೃದಯರು ನೀಡುತ್ತಿರುವ ಉತ್ತೇಜನ ಸದಾ ಸ್ಮರಣೀಯವಾಗಿದೆ. ರಂಗಕಲೆಗೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ನಗರದ ಡಾ.ರಾಜ್‍ಕುಮಾರ್ ಕಲಾಭವನವನ್ನು ಆಧುನೀಕರಣಗೊಳಿಸಬೇಕಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಮಾತನಾಡಿ, ಮಾಧ್ಯಮಗಳ ಪ್ರಭಾವದಿಂದಾಗಿ ಇಂದು ರಂಗಕಲೆ ನೇಪಥ್ಯಕ್ಕೆ ಸರಿಯುತ್ತಿರುವ ಇಂದಿನ ಸಂದರ್ಭದಲ್ಲಿ ನಾಟಕ ಕಲೆಯನ್ನು ಉತ್ತೇಜಿಸಲು ನಾಟಕೋತ್ಸವ ಕಾರ್ಯಕ್ರಮಗಳು ಇಂಬು ನೀಡುತ್ತಿವೆ ಎಂದರು.

ಕಾರ್ಯಕ್ರಮದ ಅಂಗವಾಗಿ, ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದಿಂದ ರಂಗ ಗೀತೆಗಳು ಹಾಗೂ ಗೀತ ಗಾಯನ, ವಿ.ವೆಂಕಟೇಶ್ ಅವರಿಂದ ಮಾತನಾಡುವ ಗೊಂಬೆ ಪ್ರದರ್ಶನ,ಶ್ರೀ ರಾಘವೇಂದ್ರ ಸಾಂಸ್ಕøತಿಕ ಯೋಗ ಕೇಂದ್ರ, ನಟಗಂಗೋತ್ರಿ ವತಿಯಿಂದ ಸಿನಿ ಮಹಾತ್ಮೆ ಹಾಸ್ಯ ಸಾಮಾಜಿಕ ನಾಟಕ ಪ್ರದರ್ಶನ ಹಾಗೂ ರಾತ್ರಿ ಶ್ರೀ ಹುತ್ತದ ಮಹಾಗಣಪತಿ ಕೃಪಾ ಪೆÇೀಷಿತ ನಾಟಕ ಮಂಡಲಿ (ಭುವನೇಶ್ವರಿ ನಗರ) ವತಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

ಸಮಾರಂಭದಲ್ಲಿ ತಾಲೂಕಿನ ಹಿರಿಯ ಕಲಾವಿದರಾದ ನಾರಾಯಣಪ್ಪ ಹಳೇಕೋಟೆ, ಎನ್.ರಾಮಾಂಜಿನಪ್ಪ, ಬಿ.ಚಂದ್ರಶೇಖರ್, ಜಿ.ಎ.ನಂಜೇಗೌಡ, ರಾಮಣ್ಣ ಕಾರನಾಳ, ಓಬಮ್ಮ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಬಿಜೆಪಿ.ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟ ಸಂಚಾಲಕರಾದ ಧಿರಜ್ ಮುನಿರಾಜು, ನಗರಸಭಾ ಸದಸ್ಯರಾದ ಎಸ್.ವತ್ಸಲಾ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

7 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

18 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

2 days ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago