ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರಾ ನಾಟಕೋತ್ಸವ ಸಮಾರೋಪ ಸಮಾರಂಭ

ಇಂದಿನ ಆಧುನಿಕ ಯುಗಕ್ಕೆ ತಕ್ಕಂತೆ ಹವ್ಯಾಸಿ ಹಾಗೂ ವೃತ್ತಿ ರಂಗಭೂಮಿ ಹೊಸ ಸ್ವರೂಪ ಹಾಗೂ ರಂಗ ಸಜ್ಜಿಕೆಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಎಂ.ಎಸ್.ಗುಣಶೀಲನ್ ಹೇಳಿದರು.

ನಗರದ ಸರ್.ಎಂ.ವಿಶ್ವೇಶ್ವರಯ್ಯ ವೃತ್ತದಲ್ಲಿ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರಾ ಸಾಂಸ್ಕೃತಿಕ ಸಮಿತಿ, ತಾಲೂಕು ಕಲಾವಿದರ ಸಂಘ, ನಗರಸಭೆ, ಕನ್ನಡ ಜಾಗೃತ ಪರಿಷತ್ತು ಹಾಗೂ ಅನಿಕೇತನ ಟ್ರಸ್ಟ್ ಸಹಯೋಗದೊಂದಿಗೆ ನಡೆದ ನಾಟಕೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಅಸಂಖ್ಯಾತ ಕಲಾವಿದರಿದ್ದು, ರಂಗ ಕಲೆಗಳಲ್ಲಿ ನಿರತರಾಗಿದ್ದಾರೆ. ಈಗ ಹವ್ಯಾಸಿ ರಂಗಭೂಮಿ ಹೊಸ ಆಯಾಮಗಳ ಮೂಲಕ ಪ್ರೇಕ್ಷಕರಿಗೆ ತಲುಪುತ್ತಿರುವುದು ಉತ್ತಮ ಬೆಳವಣಿಗೆ. ದೊಡ್ಡಬಳ್ಳಾಪುರದಲ್ಲಿ ನಟಗಂಗೋತ್ರಿ ಮೊದಲಾದ ನಾಟಕ ತಂಡಗಳು ಸಾಮಾಜಿಕ, ಐತಿಹಾಸಿಕ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಮನ್ನಣೆ ಗಳಿಸಿದ್ದವು.

ಈ ತಂಡದಲ್ಲಿ ಅಭಿನಯಿಸಿದ ಬಹಳಷ್ಟು ಮಂದಿ ಉತ್ತಮ ಕಲಾವಿದರಾಗಿ ರೂಪುಗೊಂಡಿದ್ದಾರೆ. ನಾಟಕ ಕಲೆಗೆ ಇಲ್ಲಿನ ಸಹೃದಯರು ನೀಡುತ್ತಿರುವ ಉತ್ತೇಜನ ಸದಾ ಸ್ಮರಣೀಯವಾಗಿದೆ. ರಂಗಕಲೆಗೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ನಗರದ ಡಾ.ರಾಜ್‍ಕುಮಾರ್ ಕಲಾಭವನವನ್ನು ಆಧುನೀಕರಣಗೊಳಿಸಬೇಕಾಗಿದೆ ಎಂದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್ ಮಾತನಾಡಿ, ಮಾಧ್ಯಮಗಳ ಪ್ರಭಾವದಿಂದಾಗಿ ಇಂದು ರಂಗಕಲೆ ನೇಪಥ್ಯಕ್ಕೆ ಸರಿಯುತ್ತಿರುವ ಇಂದಿನ ಸಂದರ್ಭದಲ್ಲಿ ನಾಟಕ ಕಲೆಯನ್ನು ಉತ್ತೇಜಿಸಲು ನಾಟಕೋತ್ಸವ ಕಾರ್ಯಕ್ರಮಗಳು ಇಂಬು ನೀಡುತ್ತಿವೆ ಎಂದರು.

ಕಾರ್ಯಕ್ರಮದ ಅಂಗವಾಗಿ, ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದಿಂದ ರಂಗ ಗೀತೆಗಳು ಹಾಗೂ ಗೀತ ಗಾಯನ, ವಿ.ವೆಂಕಟೇಶ್ ಅವರಿಂದ ಮಾತನಾಡುವ ಗೊಂಬೆ ಪ್ರದರ್ಶನ,ಶ್ರೀ ರಾಘವೇಂದ್ರ ಸಾಂಸ್ಕøತಿಕ ಯೋಗ ಕೇಂದ್ರ, ನಟಗಂಗೋತ್ರಿ ವತಿಯಿಂದ ಸಿನಿ ಮಹಾತ್ಮೆ ಹಾಸ್ಯ ಸಾಮಾಜಿಕ ನಾಟಕ ಪ್ರದರ್ಶನ ಹಾಗೂ ರಾತ್ರಿ ಶ್ರೀ ಹುತ್ತದ ಮಹಾಗಣಪತಿ ಕೃಪಾ ಪೆÇೀಷಿತ ನಾಟಕ ಮಂಡಲಿ (ಭುವನೇಶ್ವರಿ ನಗರ) ವತಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

ಸಮಾರಂಭದಲ್ಲಿ ತಾಲೂಕಿನ ಹಿರಿಯ ಕಲಾವಿದರಾದ ನಾರಾಯಣಪ್ಪ ಹಳೇಕೋಟೆ, ಎನ್.ರಾಮಾಂಜಿನಪ್ಪ, ಬಿ.ಚಂದ್ರಶೇಖರ್, ಜಿ.ಎ.ನಂಜೇಗೌಡ, ರಾಮಣ್ಣ ಕಾರನಾಳ, ಓಬಮ್ಮ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಬಿಜೆಪಿ.ಜಿಲ್ಲಾ ಫಲಾನುಭವಿಗಳ ಪ್ರಕೋಷ್ಟ ಸಂಚಾಲಕರಾದ ಧಿರಜ್ ಮುನಿರಾಜು, ನಗರಸಭಾ ಸದಸ್ಯರಾದ ಎಸ್.ವತ್ಸಲಾ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

3 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

4 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

5 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

5 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

9 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

11 hours ago