ಶ್ರೀ ಮಹರ್ಷಿ ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ವ್ಯಕ್ತಿ, ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ ಬರೆದ ವಾಲ್ಮೀಕಿ ರಾಮಾಯಣ ಇಂದಿಗೂ ಸ್ಮರಣೀಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ರವರು ಹೇಳಿದರು.

ದೇವನಹಳ್ಳಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.

24 ಸಾವಿರ ಕವನಗಳನ್ನು ರಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಗುಣಮಟ್ಟದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಸಮಾಜದಲ್ಲಿ ಏಳಿಗೆ ಸಾಧ್ಯ. ಹಿಂದುಳಿದವರ ಅಭಿವೃದ್ಧಿಗಾಗಿ ಸಮುದಾಯದ ಶಾಲೆಗಳನ್ನು ನಿರ್ಮಿಸಿರುವುದು ಆರ್ಥಿಕವಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜಗಳು ಶಿಕ್ಷಣ‌ ಪಡೆದು ಸಮಾಜದಲ್ಲಿ ಮುಂಚೂಣಿಯಲ್ಲಿರಬೇಕು ಎಂಬ ಉದ್ದೇಶದಿಂದ, ಪರಿಶಿಷ್ಟ ಪಂಗಡದ ಹೆಣ್ಣುಮಕ್ಕಳಿಗೆ 6 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಮಂಜೂರಾತಿಯಾಗಿದೆ. ಹೆಣ್ಣು ಮಕ್ಕಳು ಸಹ ಉತ್ತಮ ವಿದ್ಯಾಭ್ಯಾಸ ಪಡೆದು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂಬ ಆಶಯ ವ್ಯಕ್ತಪಡಿಸಿ, ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಸಂಸದರಾದ ಸಿ.ನಾರಾಯಣ ಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು ರಾಜಣ್ಣ, ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ಇ.ಒ ಶ್ರೀನಾಥ್ ಗೌಡ, ಸಮುದಾಯದ ಅಧ್ಯಕ್ಷರಾದ ಜಿ.ನಾಗೇಶ್ ಬಾಬು ಹಾಗೂ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

10 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

15 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago