ಶ್ರೀ ಮಹರ್ಷಿ ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ವ್ಯಕ್ತಿ, ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ ಬರೆದ ವಾಲ್ಮೀಕಿ ರಾಮಾಯಣ ಇಂದಿಗೂ ಸ್ಮರಣೀಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ರವರು ಹೇಳಿದರು.

ದೇವನಹಳ್ಳಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.

24 ಸಾವಿರ ಕವನಗಳನ್ನು ರಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಗುಣಮಟ್ಟದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಸಮಾಜದಲ್ಲಿ ಏಳಿಗೆ ಸಾಧ್ಯ. ಹಿಂದುಳಿದವರ ಅಭಿವೃದ್ಧಿಗಾಗಿ ಸಮುದಾಯದ ಶಾಲೆಗಳನ್ನು ನಿರ್ಮಿಸಿರುವುದು ಆರ್ಥಿಕವಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜಗಳು ಶಿಕ್ಷಣ‌ ಪಡೆದು ಸಮಾಜದಲ್ಲಿ ಮುಂಚೂಣಿಯಲ್ಲಿರಬೇಕು ಎಂಬ ಉದ್ದೇಶದಿಂದ, ಪರಿಶಿಷ್ಟ ಪಂಗಡದ ಹೆಣ್ಣುಮಕ್ಕಳಿಗೆ 6 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಮಂಜೂರಾತಿಯಾಗಿದೆ. ಹೆಣ್ಣು ಮಕ್ಕಳು ಸಹ ಉತ್ತಮ ವಿದ್ಯಾಭ್ಯಾಸ ಪಡೆದು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂಬ ಆಶಯ ವ್ಯಕ್ತಪಡಿಸಿ, ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಸಂಸದರಾದ ಸಿ.ನಾರಾಯಣ ಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು ರಾಜಣ್ಣ, ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ಇ.ಒ ಶ್ರೀನಾಥ್ ಗೌಡ, ಸಮುದಾಯದ ಅಧ್ಯಕ್ಷರಾದ ಜಿ.ನಾಗೇಶ್ ಬಾಬು ಹಾಗೂ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

3 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

5 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

6 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

20 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

22 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

1 day ago