Categories: ಕೋಲಾರ

ಶ್ರೀ ರೇಣುಕಾ ಯಲ್ಲಮ್ಮ ದೇವಿ ಕರಗ ಮಹೋತ್ಸವದಲ್ಲಿ ಶಾಸಕ, ಎಂಎಲ್ಸಿ ಭಾಗಿ

ಕೋಲಾರ: ಹಿಂದಿನ ಕಾಲದಿಂದ ನಡೆದುಕೊಂಡು ಬರುತ್ತಿರುವ ಜಾನಪದ ಕಲೆಗಳು, ಸಂಸ್ಕೃತಿಯ ಸಂಪ್ರದಾಯ ಪದ್ದತಿಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ಕೆಲಸವನ್ನು ನಾವು ಎಲ್ಲರೂ ಸೇರಿ ಮಾಡಬೇಕಾಗಿದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ನಗರದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ವಾರ್ಷಿಕೋತ್ಸವ ಹಾಗೂ ಹೂವಿನ ಕರಗ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಡಿನ ಜಾನಪದ ಕಲೆಗಳಿಗೆ ಅದರದೇ ಆದ ಇತಿಹಾಸ ಮತ್ತು ಪರಂಪರೆಯ ಜೊತೆಗೆ ಸಂಸ್ಕೃತಿ ಇದೆ. ಈ ಪರಂಪರೆಗಳು ಮೌಲ್ಯಯುತವಾಗಿದ್ದು, ಅವುಗಳನ್ನು ಆಚರಣೆ ಮಾಡಿಕೊಂಡು ಹೋದಾಗ ಮಾತ್ರವೇ ಅವು ಜೀವಂತವಾಗಿ ಮುಂದಿನ ಪೀಳಿಗೆಗೆ ಉಳಿಯುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಪಿವಿಸಿ ಕೃಷ್ಣಪ್ಪ, ಕೆಪಿಸಿಸಿ ಕಾರ್ಯದರ್ಶಿ ಕಾರ್ತಿಕ್, ನಗರಸಭೆ ಸದಸ್ಯೆ ಅಪೂರ್ವ ರಾಮಚಂದ್ರ ಮಾಜಿ ಸದಸ್ಯ ರಮೇಶ್ ಮುಖಂಡರಾದ ಮುರಳಿಗೌಡ, ಮಲೇಷಿಯಾ ರಾಜಕುಮಾರ್, ಅಕ್ರಂ, ವೈ ಶಿವಕುಮಾರ್, ಜನಪನಹಳ್ಳಿ ನವೀನ್ ಕುಮಾರ್, ರಾಮಚಂದ್ರ, ಸೇರಿದಂತೆ ವಿನಾಯಕ ಮಿತ್ರ ಬಳಗ, ಅಂಬೇಡ್ಕರ್ ನಗರದ ಹಿರಿಯರ ಮತ್ತು ಕಿರಿಯರ ಮಿತ್ರ ಬಳಗದವರು ಈ ಸಂದರ್ಭದಲ್ಲಿ ಇದ್ದರು

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

2 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

3 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

20 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago