ಕೋಲಾರ: ಹಿಂದಿನ ಕಾಲದಿಂದ ನಡೆದುಕೊಂಡು ಬರುತ್ತಿರುವ ಜಾನಪದ ಕಲೆಗಳು, ಸಂಸ್ಕೃತಿಯ ಸಂಪ್ರದಾಯ ಪದ್ದತಿಗಳನ್ನು ಮುಂದಿನ ಪೀಳಿಗೆಗೆ ಉಳಿಸುವ ಕೆಲಸವನ್ನು ನಾವು ಎಲ್ಲರೂ ಸೇರಿ ಮಾಡಬೇಕಾಗಿದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.
ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ನಗರದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ವಾರ್ಷಿಕೋತ್ಸವ ಹಾಗೂ ಹೂವಿನ ಕರಗ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಡಿನ ಜಾನಪದ ಕಲೆಗಳಿಗೆ ಅದರದೇ ಆದ ಇತಿಹಾಸ ಮತ್ತು ಪರಂಪರೆಯ ಜೊತೆಗೆ ಸಂಸ್ಕೃತಿ ಇದೆ. ಈ ಪರಂಪರೆಗಳು ಮೌಲ್ಯಯುತವಾಗಿದ್ದು, ಅವುಗಳನ್ನು ಆಚರಣೆ ಮಾಡಿಕೊಂಡು ಹೋದಾಗ ಮಾತ್ರವೇ ಅವು ಜೀವಂತವಾಗಿ ಮುಂದಿನ ಪೀಳಿಗೆಗೆ ಉಳಿಯುತ್ತದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ ಗೌತಮ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಪಿವಿಸಿ ಕೃಷ್ಣಪ್ಪ, ಕೆಪಿಸಿಸಿ ಕಾರ್ಯದರ್ಶಿ ಕಾರ್ತಿಕ್, ನಗರಸಭೆ ಸದಸ್ಯೆ ಅಪೂರ್ವ ರಾಮಚಂದ್ರ ಮಾಜಿ ಸದಸ್ಯ ರಮೇಶ್ ಮುಖಂಡರಾದ ಮುರಳಿಗೌಡ, ಮಲೇಷಿಯಾ ರಾಜಕುಮಾರ್, ಅಕ್ರಂ, ವೈ ಶಿವಕುಮಾರ್, ಜನಪನಹಳ್ಳಿ ನವೀನ್ ಕುಮಾರ್, ರಾಮಚಂದ್ರ, ಸೇರಿದಂತೆ ವಿನಾಯಕ ಮಿತ್ರ ಬಳಗ, ಅಂಬೇಡ್ಕರ್ ನಗರದ ಹಿರಿಯರ ಮತ್ತು ಕಿರಿಯರ ಮಿತ್ರ ಬಳಗದವರು ಈ ಸಂದರ್ಭದಲ್ಲಿ ಇದ್ದರು
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…