ದೇವನಹಳ್ಳಿ ತಾಲ್ಲೂಕು ಕೋರಮಂಗಲ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಯುವಕರ ಸಂಘ (ರಿ) ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ಸಂಘದ ಅಧ್ಯಕ್ಷರಾದ ಎಂ.ನವೀನಕುಮಾರ್ ಮಾತಮಾಡಿ, ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ, ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿ ದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರುಗಳಾದ ಕೃಷ್ಣಪ್ಪ, ಶಿವರಾಜು ಮತ್ತು ಸಂಘ ಪದಾಧಿಕಾರಿಗಳಾದ ಮನೋಜ್, ಚನ್ನಕೇಶವ, ಪ್ರಶಾಂತ, ರಮೇಶ್ ನಾಯಕ, ಹರೀಶ, ಮುನಿರಾಜು, ಶಶಿ , ಕಿರಣ್ , ಮಹೇಶ್ ಹಾಗೂ ಸಮುದಾಯದ ಮುಖಂಡರಾದ ನಾರಾಯಣಸ್ವಾಮಿ, ಕೆ,ಓ, ಮುನಿರಾಜು, ಹನುಮಪ್ಪ, ಮೂರ್ತಿ, ಶ್ರೀಧರ್ ಇನ್ನು ಹಲವು ಮುಖಂಡರು ಹಾಜರಿದ್ದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…