ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಅವರ ದ್ವಿಶತಕದ ಜೊತೆಯಾಟ ಹಾಗೂ ಬೌಲರ್ ಗಳ ಕೈಚಳಕದಿಂದ ಭಾರತ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ಜಯಿಸಿತು.
ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಪ್ರವಾಸಿ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಭಾರತವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿ ರುತುರಾಜ್ ಗಾಯಕ್ವಾಡ್ (8)ರನ್ ಗಳಿಸಿದ್ದಾಗ ವೇಗಿ ಜೋಶ್ ಹೆಜಲ್ವುಡ್ ವಿಕೆಟ್ ಪಡೆದು ಆರಂಭಿಕ ಮೇಲುಗೈ ಸಾಧಿಸಿದರು.
ಇವರಿಬ್ಬರು ಪೆವಿಲಿಯನ್ ಗೆ ತೆರಳಿದ ನಂತರ ಒಂದಾದ ನಾಯಕ ಕೆ.ಎಲ್. ರಾಹುಲ್ (52), ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (31), ಸೂರ್ಯ ಕುಮಾರ್ ಯಾದವ್ (72) ಇವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಪ್ರವಾಸಿ ತಂಡಕ್ಕೆ 400 ರನ್ ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿತು.
ಗುರಿ ಬೆನ್ನತ್ತಿದ್ದ ಪ್ರವಾಸಿ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಎದುರಿಸಿತು, ಎರಡನೇ ಓವರ್ ನಲ್ಲಿ ಮ್ಯಾಥ್ಯೂ ಶಾಟ್ (9) ಹಾಗೂ ನಾಯಕ ಸ್ಟೀವನ್ ಸ್ಮಿತ್ (0) ಪ್ರಸಿದ್ಧ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು.
ನಂತರ ಒಂದಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (52) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಬುಶನಗೆ (27) ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಯತ್ನಿಸಿದರು ಆದರೆ ವರುಣನ ಆರ್ಭಟಕ್ಕೆ ಪಂದ್ಯವನ್ನು ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ 33 ಓವರ್ ಗೆ 316 ರನ್ ಗುರಿ ನೀಡಲಾಯಿತು.
ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತ 99 ರನ್ ಅಂತರದಲ್ಲಿ ಗೆಲವು ದಾಖಲಿಸಿತು. ಭಾರತದ ಪರವಾಗಿ ಮಿಂಚಿದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…