ಬಳ್ಳಾರಿ: ತೀವ್ರ ಉಸಿರಾಟದ ಸಮಸ್ಯೆ ಹಾಗೂ ಹೃದಯದ ಅಪಧಮನಿಯ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ 38 ವರ್ಷದ ಬಳ್ಳಾರಿ ಮೂಲದ ವ್ಯಕ್ತಿಗೆ ಕನ್ನಿಂಗ್ ಹ್ಯಾಮ್ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡುವ ಮೂಲಕ ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ಮರುಜೀವ ನೀಡಲಾಗಿದೆ.
ಫೋರ್ಟಿಸ್ ಆಸ್ಪತ್ರೆಯ ಇಂಟರ್ನಲ್ ಮೆಡಿಸನ್ ಕನ್ಸಲ್ಟೆಂಟ್, ಡಾ. ನಾಸಿರುದ್ದೀನ್ ಜಿ. ನೇತೃತ್ವದ ವೈದ್ಯರ ತಂಡ ಈ ಶಸ್ತ್ರಚಿಕಿತ್ಸೆ ನಡಿಸಿದೆ. ಈ ಕುರಿತು ಮಾತನಾಡಿದ, ಡಾ. ನಾಸಿರುದ್ದೀನ್ ಜಿ, ಚೈತನ್ಯ ಎಂಬ 38 ವರ್ಷದ ವ್ಯಕ್ತಿಗೆ ಈ ಮೊದಲು ಹೃದಯಾಘಾತವಾಗಿತ್ತು. ಚಿಕಿತ್ಸೆ ವೇಳೆ ಅವರು ಪಡೆದಿದ್ದ ಥ್ರಂಬೋಲಿಟಿಕ್ ಚುಚ್ಚುಮದ್ದು ಅವರ ಶ್ವಾಸಕೋಶದಲ್ಲಿ ರಕ್ತಸ್ರಾವಕ್ಕೆ ಕಾರಣವಾಗಿದೆ.
ಪ್ರಮುಖವಾಗಿ “ಪ್ರಸರಣ ಅಲ್ವಿಯೋಲಾರ್ ರಕ್ತಸ್ರಾವ” ಆಗತೊಡಗಿತ್ತು. ರಕ್ತಹೆಪ್ಪುಗಟ್ಟುವಿಕೆಯಿಂದಾಗಿ ಅವರ ಶ್ವಾಸಕೋಶ ಸಂಪೂರ್ಣ ಹಾಳಾಗಿತ್ತು. ಕೆಮ್ಮುವಾಗ ಮೂಗಿನಿಂದ ರಕ್ತಸ್ರಾವ, ಗುದನಾಳದಲ್ಲಿ ರಕ್ತಸ್ರಾವ ಸೇರಿದಂತೆ ಹಲವು ಅಂಗಾಂಗಳಲ್ಲಿ ರಕ್ತಸ್ರಾವ ಆಗತೊಡಗಿತ್ತು. ಇದರಿಂದ ರೋಗಿಯ ಹಿಮೋಗ್ಲೋಬಿನ್ ಮಟ್ಟ ಸಂಪೂರ್ಣವಾಗಿ ಕುಸಿಯತೊಡಗಿತ್ತು. ಈ ಎಲ್ಲಾ ತೊಂದರೆಯಿಂದ ಅವರು ಸಾವು ಬದುಕಿನ ನಡುವೆ ಹೋರಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಳ್ಳಾರಿಯ ಆಸ್ಪತ್ರೆಗೆ ಕರೆದೊಯ್ದರೂ, ರೋಗಿಯು ಈಗಾಗಲೇ ಚಿಂತಾಜನ ಸ್ಥಿತಿಗೆ ತಲುಪಿದ್ದ ಕಾರಣ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದರು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಇವರ ಪರಿಸ್ಥಿತಿಯನ್ನು ಅರಿತು, ಇವರ ಬದುಕುವಿಕೆಯ ಪ್ರಮಾಣವೂ ಕಡಿಮೆ ಇತ್ತು. ಈ ಎಲ್ಲಾ ಸವಾಲುಗಳ ಮಧ್ಯೆ ರೋಗಿಯನ್ನು ಬದುಕಿಸಲೇ ಬೇಕೆಂದು ನಮ್ಮ ವೈದ್ಯ ತಂಡ, ಆಕ್ರಮಣಕಾರಿಯಲ್ಲದ, ಆಮ್ಲಜನಕ ನೀಡುವ ಜೊತೆಗೆ ಸೂಕ್ತ ಚಿಕಿತ್ಸೆ ನೀಡಲಾಯಿತು.
ರಕ್ತದ ವರ್ಗಾವಣೆ ಸೇರಿದಂತೆ ಅವರ ದೇಹದಲ್ಲಿ ಆಂಟಿಬಯೋಟಿಕ್ ಹೆಚ್ಚಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಿದೆವು. ನಮ್ಮೆಲ್ಲಾ ಪ್ರಯತ್ನದ ಬಳಿಕ ಕೇವಲ 10 ದಿನಗಳಲ್ಲಿಯೇ ರೋಗಿಯೂ ಸಂಪೂರ್ಣ ಚೇತರಿಸಿಕೊಂಡರು ಎಂದು ವಿವರಿಸಿದರು.
ಫೋರ್ಟಿಸ್ ಆಸ್ಪತ್ರೆ ಫೆಸಿಲಿಟಿ ಡೈರೆಕ್ಟರ್ ಚಂದ್ರಶೇಖರ್ ಆರ್. ಮಾತನಾಡಿ, ಶ್ವಾಸಕೋಶದಲ್ಲಿ ರಕ್ತಸ್ತ್ರಾವವಾಗಿ, ಸಾವಿನ ದವಡೆ ತಲುಪಿದ್ದ ವ್ಯಕ್ತಿಗೂ ಸಹ ಜೀವ ಉಳಿಸುವ ಅತ್ಯಾಧುನಿಕ ತಂತ್ರಜ್ಞಾನದ ಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ನೀಡಲಾಗಿದೆ. ಅಂತಹ ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ನಿಭಾಯಿಸುವಲ್ಲಿ ಮತ್ತು ಯಶಸ್ವಿ ಫಲಿತಾಂಶಗಳನ್ನು ಸಾಧಿಸುವಲ್ಲಿ ನಮ್ಮ ತಂಡದ ಪರಿಣತಿಯ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…