Categories: ಆರೋಗ್ಯ

ಶ್ವಾಸಕೋಶದಲ್ಲಿ ರಕ್ತಸ್ರಾವ, ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ಯಶಸ್ವಿ ಚಿಕಿತ್ಸೆ

ಬಳ್ಳಾರಿ: ತೀವ್ರ ಉಸಿರಾಟದ ಸಮಸ್ಯೆ ಹಾಗೂ ಹೃದಯದ ಅಪಧಮನಿಯ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ 38 ವರ್ಷದ ಬಳ್ಳಾರಿ ಮೂಲದ ವ್ಯಕ್ತಿಗೆ ಕನ್ನಿಂಗ್‌ ಹ್ಯಾಮ್‌ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡುವ ಮೂಲಕ ಸಾವಿನ ದವಡೆ ತಲುಪಿದ್ದ ವ್ಯಕ್ತಿಗೆ ಮರುಜೀವ ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಇಂಟರ್ನಲ್‌ ಮೆಡಿಸನ್‌ ಕನ್ಸಲ್ಟೆಂಟ್‌, ಡಾ. ನಾಸಿರುದ್ದೀನ್ ಜಿ. ನೇತೃತ್ವದ ವೈದ್ಯರ ತಂಡ ಈ ಶಸ್ತ್ರಚಿಕಿತ್ಸೆ ನಡಿಸಿದೆ. ಈ ಕುರಿತು ಮಾತನಾಡಿದ, ಡಾ. ನಾಸಿರುದ್ದೀನ್ ಜಿ, ಚೈತನ್ಯ ಎಂಬ 38 ವರ್ಷದ ವ್ಯಕ್ತಿಗೆ ಈ ಮೊದಲು ಹೃದಯಾಘಾತವಾಗಿತ್ತು. ಚಿಕಿತ್ಸೆ ವೇಳೆ ಅವರು ಪಡೆದಿದ್ದ ಥ್ರಂಬೋಲಿಟಿಕ್ ಚುಚ್ಚುಮದ್ದು ಅವರ ಶ್ವಾಸಕೋಶದಲ್ಲಿ ರಕ್ತಸ್ರಾವಕ್ಕೆ ಕಾರಣವಾಗಿದೆ.

ಪ್ರಮುಖವಾಗಿ “ಪ್ರಸರಣ ಅಲ್ವಿಯೋಲಾರ್ ರಕ್ತಸ್ರಾವ” ಆಗತೊಡಗಿತ್ತು. ರಕ್ತಹೆಪ್ಪುಗಟ್ಟುವಿಕೆಯಿಂದಾಗಿ ಅವರ ಶ್ವಾಸಕೋಶ ಸಂಪೂರ್ಣ ಹಾಳಾಗಿತ್ತು. ಕೆಮ್ಮುವಾಗ ಮೂಗಿನಿಂದ ರಕ್ತಸ್ರಾವ, ಗುದನಾಳದಲ್ಲಿ ರಕ್ತಸ್ರಾವ ಸೇರಿದಂತೆ ಹಲವು ಅಂಗಾಂಗಳಲ್ಲಿ ರಕ್ತಸ್ರಾವ ಆಗತೊಡಗಿತ್ತು. ಇದರಿಂದ ರೋಗಿಯ ಹಿಮೋಗ್ಲೋಬಿನ್‌ ಮಟ್ಟ ಸಂಪೂರ್ಣವಾಗಿ ಕುಸಿಯತೊಡಗಿತ್ತು. ಈ ಎಲ್ಲಾ ತೊಂದರೆಯಿಂದ ಅವರು ಸಾವು ಬದುಕಿನ ನಡುವೆ ಹೋರಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಳ್ಳಾರಿಯ ಆಸ್ಪತ್ರೆಗೆ ಕರೆದೊಯ್ದರೂ, ರೋಗಿಯು ಈಗಾಗಲೇ ಚಿಂತಾಜನ ಸ್ಥಿತಿಗೆ ತಲುಪಿದ್ದ ಕಾರಣ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದರು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಇವರ ಪರಿಸ್ಥಿತಿಯನ್ನು ಅರಿತು, ಇವರ ಬದುಕುವಿಕೆಯ ಪ್ರಮಾಣವೂ ಕಡಿಮೆ ಇತ್ತು. ಈ ಎಲ್ಲಾ ಸವಾಲುಗಳ ಮಧ್ಯೆ ರೋಗಿಯನ್ನು ಬದುಕಿಸಲೇ ಬೇಕೆಂದು ನಮ್ಮ ವೈದ್ಯ ತಂಡ, ಆಕ್ರಮಣಕಾರಿಯಲ್ಲದ, ಆಮ್ಲಜನಕ ನೀಡುವ ಜೊತೆಗೆ ಸೂಕ್ತ ಚಿಕಿತ್ಸೆ ನೀಡಲಾಯಿತು.

ರಕ್ತದ ವರ್ಗಾವಣೆ ಸೇರಿದಂತೆ ಅವರ ದೇಹದಲ್ಲಿ ಆಂಟಿಬಯೋಟಿಕ್‌ ಹೆಚ್ಚಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಿದೆವು. ನಮ್ಮೆಲ್ಲಾ ಪ್ರಯತ್ನದ ಬಳಿಕ ಕೇವಲ 10 ದಿನಗಳಲ್ಲಿಯೇ ರೋಗಿಯೂ ಸಂಪೂರ್ಣ ಚೇತರಿಸಿಕೊಂಡರು ಎಂದು ವಿವರಿಸಿದರು.

ಫೋರ್ಟಿಸ್‌ ಆಸ್ಪತ್ರೆ ಫೆಸಿಲಿಟಿ ಡೈರೆಕ್ಟರ್‌ ಚಂದ್ರಶೇಖರ್ ಆರ್. ಮಾತನಾಡಿ, ಶ್ವಾಸಕೋಶದಲ್ಲಿ ರಕ್ತಸ್ತ್ರಾವವಾಗಿ, ಸಾವಿನ ದವಡೆ ತಲುಪಿದ್ದ ವ್ಯಕ್ತಿಗೂ ಸಹ ಜೀವ ಉಳಿಸುವ ಅತ್ಯಾಧುನಿಕ ತಂತ್ರಜ್ಞಾನದ ಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆಯಲ್ಲಿ ನೀಡಲಾಗಿದೆ. ಅಂತಹ ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ನಿಭಾಯಿಸುವಲ್ಲಿ ಮತ್ತು ಯಶಸ್ವಿ ಫಲಿತಾಂಶಗಳನ್ನು ಸಾಧಿಸುವಲ್ಲಿ ನಮ್ಮ ತಂಡದ ಪರಿಣತಿಯ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

2 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

2 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

3 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

4 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

7 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

7 hours ago