ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಷರತ್ತು ಸರಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್ ಎಂದು ಮೂದಲಿಸಿದ್ದಾರೆ.
‘ಷರತ್ತುಸಹಿತ’ವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ.
ಜನರ ಸಹನೆ ಎನ್ನುವುದು ಖಂಡಿತ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.
ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…