Categories: ರಾಜ್ಯ

‘ಷರತ್ತು ಸರ್ಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್’- ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಹೆಚ್ಡಿಕೆ ಮೂದಲಿಕೆ

ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಷರತ್ತು ಸರಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್ ಎಂದು ಮೂದಲಿಸಿದ್ದಾರೆ.

‘ಷರತ್ತುಸಹಿತ’ವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ.

ಜನರ ಸಹನೆ ಎನ್ನುವುದು ಖಂಡಿತ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.

ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

4 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

6 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

7 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

20 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

24 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago