ಸಂಕಷ್ಟದಿಂದ ಸುಸ್ಥಿತಿಗೆ – ವೈದ್ಯಕೀಯದ ಅದ್ಭುತ ಸಾಧನೆ

ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅವರು ಹೊಸ ಜೀವನವನ್ನು ಆರಂಭಿಸಿದ್ದಾರೆ.

ರೋಗಿಗೆ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುವ ಸಮಸ್ಯೆ ಇತ್ತು. ಕಾಲಕ್ರಮೇಣ ಸಮಸ್ಯೆ ತೀವ್ರಗೊಂಡು, ಕಳೆದ ಮೂರು ತಿಂಗಳಿನಿಂದ ಕರುಳು ಸಂಪೂರ್ಣವಾಗಿ ಹೊರಗಡೆಯೇ ಉಳಿದು ಕೊಳೆತು ಹೋಗಿತ್ತು. ಇದರಿಂದ ತೀವ್ರ ನೋವು, ಅಸಹನೆ ಹಾಗೂ ದೈನಂದಿನ ಚಟುವಟಿಕೆಗಳನ್ನು ನಡೆಸುವುದೇ ಕಷ್ಟಕರವಾಗಿತ್ತು. ಜೊತೆಗೆ ಎರಡೂ ಕಾಲುಗಳಲ್ಲಿ ನೋವು ಹಾಗೂ ಕೈಕಾಲುಗಳಲ್ಲಿ ನಿರಂತರ ಜಗ್ಗುವ ಅನುಭವವೂ ಕಾಣಿಸಿಕೊಂಡಿತ್ತು.

ಹಲವೆಡೆ ಚಿಕಿತ್ಸೆ ಪಡೆದರೂ ಯಾವುದೇ ಪ್ರಯೋಜನವಾಗದೆ, ರೋಗಿಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇತ್ತು. ದೈಹಿಕ ಮಾತ್ರವಲ್ಲದೆ ಮಾನಸಿಕವಾಗಿಯೂ ಇದು ದೊಡ್ಡ ಸವಾಲಾಗಿ ಪರಿಣಮಿಸಿತ್ತು.

ಕೊನೆಗೆ ಅವರು ಪಶ್ಚಿಮ ಬಂಗಾಳದಿಂದ ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಕನ್ಸಲ್ಟೆಂಟ್ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರನ್ನು ಸಂಪರ್ಕಿಸಿದರು. ಸಂಪೂರ್ಣ ಪರೀಕ್ಷೆಗಳು ಹಾಗೂ ಅಗತ್ಯ ತನಿಖೆಗಳ ನಂತರ, “ಇನ್‌ಕಾರ್ಸರೆಟೆಡ್ ರೆಕ್ಟಲ್ ಪ್ರೋಲಾಪ್ಸ್” ಹಾಗೂ ಗ್ಯಾಂಗ್ರಿನಸ್ ಮ್ಯುಕೋಸಾ” ಎಂದು ದೃಢಪಟ್ಟಿದ್ದು, ತುರ್ತು ಶಸ್ತ್ರಚಿಕಿತ್ಸೆ ಅಗತ್ಯವೆಂದು ವೈದ್ಯರು ನಿರ್ಧರಿಸಿದರು.

ಶಸ್ತ್ರಚಿಕಿತ್ಸೆಯ ವೇಳೆ ಎರಡೂ ಗ್ಲೂಟಿಯಲ್ ಭಾಗಗಳಲ್ಲಿ ಪ್ರೆಶರ್ ಸೋರ್‌ಗಳು ಹಾಗೂ ಕರುಳಿನ ಭಾಗ ಕೊಳೆತು ಹೋಗಿರುವುದು ಕಂಡುಬಂದಿತು. ಅಗತ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಯಿತು.

ಶಸ್ತ್ರಚಿಕಿತ್ಸೆಯ ನಂತರ ರೋಗಿ ಉತ್ತಮವಾಗಿ ಚೇತರಿಸಿಕೊಂಡು, ಈಗ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಕಳೆದ ಒಂದೂವರೆ ವರ್ಷಗಳಿಂದ ನರದ ಸಮಸ್ಯೆಯಿಂದ ಬಳಲುತ್ತಿದ್ದು, ಅದರ ಪರಿಣಾಮವಾಗಿ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುತ್ತಿತ್ತು ಎಂಬುದು ತಿಳಿದುಬಂದಿದೆ. ಕಳೆದ ಮೂರು ತಿಂಗಳಿನಿಂದ ಸಮಸ್ಯೆ ಗಂಭೀರಗೊಂಡಿತ್ತು. ಈ ವೇಳೆ ನ್ಯೂರೋ ಸರ್ಜನ್ ಡಾ. ದೀಪಕ್ ಅರಸಿಕೆರೆ ಅವರು ನರ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ನೀಡಿದ್ದಾರೆ.

ಈ ಕುರಿತು ಡಾ. ಕೌಶಿಕ್ ಸುಬ್ರಮಣಿಯನ್ ಅವರು ಮಾತನಾಡಿ, “ಇಂತಹ ಕಾಯಿಲೆಗಳನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ ಉಂಟಾಗಬಹುದು. ಸಮಯಕ್ಕೆ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ,” ಎಂದು ಹೇಳಿದರು.

Ramesh Babu

Journalist

Recent Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ…

7 hours ago

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…

10 hours ago

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

12 hours ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

20 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

1 day ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

1 day ago