ಸಂಕಷ್ಟದಿಂದ ಸುಸ್ಥಿತಿಗೆ – ವೈದ್ಯಕೀಯದ ಅದ್ಭುತ ಸಾಧನೆ

ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅವರು ಹೊಸ ಜೀವನವನ್ನು ಆರಂಭಿಸಿದ್ದಾರೆ.

ರೋಗಿಗೆ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುವ ಸಮಸ್ಯೆ ಇತ್ತು. ಕಾಲಕ್ರಮೇಣ ಸಮಸ್ಯೆ ತೀವ್ರಗೊಂಡು, ಕಳೆದ ಮೂರು ತಿಂಗಳಿನಿಂದ ಕರುಳು ಸಂಪೂರ್ಣವಾಗಿ ಹೊರಗಡೆಯೇ ಉಳಿದು ಕೊಳೆತು ಹೋಗಿತ್ತು. ಇದರಿಂದ ತೀವ್ರ ನೋವು, ಅಸಹನೆ ಹಾಗೂ ದೈನಂದಿನ ಚಟುವಟಿಕೆಗಳನ್ನು ನಡೆಸುವುದೇ ಕಷ್ಟಕರವಾಗಿತ್ತು. ಜೊತೆಗೆ ಎರಡೂ ಕಾಲುಗಳಲ್ಲಿ ನೋವು ಹಾಗೂ ಕೈಕಾಲುಗಳಲ್ಲಿ ನಿರಂತರ ಜಗ್ಗುವ ಅನುಭವವೂ ಕಾಣಿಸಿಕೊಂಡಿತ್ತು.

ಹಲವೆಡೆ ಚಿಕಿತ್ಸೆ ಪಡೆದರೂ ಯಾವುದೇ ಪ್ರಯೋಜನವಾಗದೆ, ರೋಗಿಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇತ್ತು. ದೈಹಿಕ ಮಾತ್ರವಲ್ಲದೆ ಮಾನಸಿಕವಾಗಿಯೂ ಇದು ದೊಡ್ಡ ಸವಾಲಾಗಿ ಪರಿಣಮಿಸಿತ್ತು.

ಕೊನೆಗೆ ಅವರು ಪಶ್ಚಿಮ ಬಂಗಾಳದಿಂದ ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಕನ್ಸಲ್ಟೆಂಟ್ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರನ್ನು ಸಂಪರ್ಕಿಸಿದರು. ಸಂಪೂರ್ಣ ಪರೀಕ್ಷೆಗಳು ಹಾಗೂ ಅಗತ್ಯ ತನಿಖೆಗಳ ನಂತರ, “ಇನ್‌ಕಾರ್ಸರೆಟೆಡ್ ರೆಕ್ಟಲ್ ಪ್ರೋಲಾಪ್ಸ್” ಹಾಗೂ ಗ್ಯಾಂಗ್ರಿನಸ್ ಮ್ಯುಕೋಸಾ” ಎಂದು ದೃಢಪಟ್ಟಿದ್ದು, ತುರ್ತು ಶಸ್ತ್ರಚಿಕಿತ್ಸೆ ಅಗತ್ಯವೆಂದು ವೈದ್ಯರು ನಿರ್ಧರಿಸಿದರು.

ಶಸ್ತ್ರಚಿಕಿತ್ಸೆಯ ವೇಳೆ ಎರಡೂ ಗ್ಲೂಟಿಯಲ್ ಭಾಗಗಳಲ್ಲಿ ಪ್ರೆಶರ್ ಸೋರ್‌ಗಳು ಹಾಗೂ ಕರುಳಿನ ಭಾಗ ಕೊಳೆತು ಹೋಗಿರುವುದು ಕಂಡುಬಂದಿತು. ಅಗತ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಯಿತು.

ಶಸ್ತ್ರಚಿಕಿತ್ಸೆಯ ನಂತರ ರೋಗಿ ಉತ್ತಮವಾಗಿ ಚೇತರಿಸಿಕೊಂಡು, ಈಗ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಕಳೆದ ಒಂದೂವರೆ ವರ್ಷಗಳಿಂದ ನರದ ಸಮಸ್ಯೆಯಿಂದ ಬಳಲುತ್ತಿದ್ದು, ಅದರ ಪರಿಣಾಮವಾಗಿ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುತ್ತಿತ್ತು ಎಂಬುದು ತಿಳಿದುಬಂದಿದೆ. ಕಳೆದ ಮೂರು ತಿಂಗಳಿನಿಂದ ಸಮಸ್ಯೆ ಗಂಭೀರಗೊಂಡಿತ್ತು. ಈ ವೇಳೆ ನ್ಯೂರೋ ಸರ್ಜನ್ ಡಾ. ದೀಪಕ್ ಅರಸಿಕೆರೆ ಅವರು ನರ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ನೀಡಿದ್ದಾರೆ.

ಈ ಕುರಿತು ಡಾ. ಕೌಶಿಕ್ ಸುಬ್ರಮಣಿಯನ್ ಅವರು ಮಾತನಾಡಿ, “ಇಂತಹ ಕಾಯಿಲೆಗಳನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ ಉಂಟಾಗಬಹುದು. ಸಮಯಕ್ಕೆ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ,” ಎಂದು ಹೇಳಿದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

22 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago