ಸಂಕಷ್ಟದಿಂದ ಸುಸ್ಥಿತಿಗೆ – ವೈದ್ಯಕೀಯದ ಅದ್ಭುತ ಸಾಧನೆ

ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅವರು ಹೊಸ ಜೀವನವನ್ನು ಆರಂಭಿಸಿದ್ದಾರೆ.

ರೋಗಿಗೆ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುವ ಸಮಸ್ಯೆ ಇತ್ತು. ಕಾಲಕ್ರಮೇಣ ಸಮಸ್ಯೆ ತೀವ್ರಗೊಂಡು, ಕಳೆದ ಮೂರು ತಿಂಗಳಿನಿಂದ ಕರುಳು ಸಂಪೂರ್ಣವಾಗಿ ಹೊರಗಡೆಯೇ ಉಳಿದು ಕೊಳೆತು ಹೋಗಿತ್ತು. ಇದರಿಂದ ತೀವ್ರ ನೋವು, ಅಸಹನೆ ಹಾಗೂ ದೈನಂದಿನ ಚಟುವಟಿಕೆಗಳನ್ನು ನಡೆಸುವುದೇ ಕಷ್ಟಕರವಾಗಿತ್ತು. ಜೊತೆಗೆ ಎರಡೂ ಕಾಲುಗಳಲ್ಲಿ ನೋವು ಹಾಗೂ ಕೈಕಾಲುಗಳಲ್ಲಿ ನಿರಂತರ ಜಗ್ಗುವ ಅನುಭವವೂ ಕಾಣಿಸಿಕೊಂಡಿತ್ತು.

ಹಲವೆಡೆ ಚಿಕಿತ್ಸೆ ಪಡೆದರೂ ಯಾವುದೇ ಪ್ರಯೋಜನವಾಗದೆ, ರೋಗಿಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇತ್ತು. ದೈಹಿಕ ಮಾತ್ರವಲ್ಲದೆ ಮಾನಸಿಕವಾಗಿಯೂ ಇದು ದೊಡ್ಡ ಸವಾಲಾಗಿ ಪರಿಣಮಿಸಿತ್ತು.

ಕೊನೆಗೆ ಅವರು ಪಶ್ಚಿಮ ಬಂಗಾಳದಿಂದ ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಕನ್ಸಲ್ಟೆಂಟ್ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರನ್ನು ಸಂಪರ್ಕಿಸಿದರು. ಸಂಪೂರ್ಣ ಪರೀಕ್ಷೆಗಳು ಹಾಗೂ ಅಗತ್ಯ ತನಿಖೆಗಳ ನಂತರ, “ಇನ್‌ಕಾರ್ಸರೆಟೆಡ್ ರೆಕ್ಟಲ್ ಪ್ರೋಲಾಪ್ಸ್” ಹಾಗೂ ಗ್ಯಾಂಗ್ರಿನಸ್ ಮ್ಯುಕೋಸಾ” ಎಂದು ದೃಢಪಟ್ಟಿದ್ದು, ತುರ್ತು ಶಸ್ತ್ರಚಿಕಿತ್ಸೆ ಅಗತ್ಯವೆಂದು ವೈದ್ಯರು ನಿರ್ಧರಿಸಿದರು.

ಶಸ್ತ್ರಚಿಕಿತ್ಸೆಯ ವೇಳೆ ಎರಡೂ ಗ್ಲೂಟಿಯಲ್ ಭಾಗಗಳಲ್ಲಿ ಪ್ರೆಶರ್ ಸೋರ್‌ಗಳು ಹಾಗೂ ಕರುಳಿನ ಭಾಗ ಕೊಳೆತು ಹೋಗಿರುವುದು ಕಂಡುಬಂದಿತು. ಅಗತ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಯಿತು.

ಶಸ್ತ್ರಚಿಕಿತ್ಸೆಯ ನಂತರ ರೋಗಿ ಉತ್ತಮವಾಗಿ ಚೇತರಿಸಿಕೊಂಡು, ಈಗ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಕಳೆದ ಒಂದೂವರೆ ವರ್ಷಗಳಿಂದ ನರದ ಸಮಸ್ಯೆಯಿಂದ ಬಳಲುತ್ತಿದ್ದು, ಅದರ ಪರಿಣಾಮವಾಗಿ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುತ್ತಿತ್ತು ಎಂಬುದು ತಿಳಿದುಬಂದಿದೆ. ಕಳೆದ ಮೂರು ತಿಂಗಳಿನಿಂದ ಸಮಸ್ಯೆ ಗಂಭೀರಗೊಂಡಿತ್ತು. ಈ ವೇಳೆ ನ್ಯೂರೋ ಸರ್ಜನ್ ಡಾ. ದೀಪಕ್ ಅರಸಿಕೆರೆ ಅವರು ನರ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ನೀಡಿದ್ದಾರೆ.

ಈ ಕುರಿತು ಡಾ. ಕೌಶಿಕ್ ಸುಬ್ರಮಣಿಯನ್ ಅವರು ಮಾತನಾಡಿ, “ಇಂತಹ ಕಾಯಿಲೆಗಳನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ ಉಂಟಾಗಬಹುದು. ಸಮಯಕ್ಕೆ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ,” ಎಂದು ಹೇಳಿದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago