ಸಂಗೀತ, ನಾಟಕಗಳ ಮೂಲಕ ಜನ ಮಾನಸದಲ್ಲಿ ಸದಾಕಾಲ ಉಳಿದುಕೊಂಡ ವ್ಯಕ್ತಿತ್ವ ಠಾಗೋರ್- ಪ್ರೊ. ಡಾ.ಎಂ.ಚಿಕ್ಕಣ್ಣ

ಬಂಗಾಳಿ ಮಹಾನ್ ವಿದ್ವಾಂಸರಾಗಿದ್ದ ಠಾಗೋರ್ ಅವರು ಬಂಗಾಳಿ ಭಾಷೆಯಲ್ಲಿ ಹಲವು ಕಾದರಂಬರಿಗಳನ್ನು ಬರೆದಿದ್ದಾರೆ, ಅಲ್ಲದೆ ಅವರು ಸಂಗೀತಕಾರರಾಗಿ ಮತ್ತು ನಾಟಕ ರಚಿಸುವ ಮೂಲಕ ಅವರು ಜನ ಮಾನಸದಲ್ಲಿ ಸದಾಕಾಲ ಉಳಿದುಕೊಳ್ಳುವ ವ್ಯಕ್ತಿತ್ವದವರು ಎಂದು ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಹೇಳಿದರು.

 ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ಸಾಂಸ್ಕೃತಿಕ ಘಟಕ, ಐ.ಕ್ಯೂ.ಎ.ಸಿ   ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಠಾಗೋರ್ ನೆನಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತೀಯ ಸಾಂಪ್ರದಾಯಿಕ, ಶಾಸ್ತ್ರೀಯ ಕಠೋರತೆಯ ಚೌಕಟ್ಟಿನಿಂದ ಹೊರ ಬಂದ ಟಾಗೋರ್‌ ಬಂಗಾಳಿ ಕಲಾ ಪ್ರಕಾರಕ್ಕೆ ಹೊಸ ಮೆರಗು ನೀಡಿದ ಅವರು, ಕಾವ್ಯಕ್ಕೆ ಹೆಸರು ವಾಸಿಯಾದರೂ ಕಾದಂಬರಿಗಳು, ಪ್ರಬಂಧಗಳು, ಸಣ್ಣ ಕಥೆಗಳು, ಪ್ರವಾಸ ಕಥನಗಳು, ನಾಟಕಗಳು, ಮತ್ತು ಸಾವಿರಾರು ಗೀತೆಗಳನ್ನೂ ರಚನೆ ಮಾಡಿದ್ದಾರೆ ಎಂದರು.

ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ ಮಾತನಾಡಿ, ಗೀತಾಂಜಲಿ (ಗೀತೆಗಳು), ಗೋರ (ಸುಂದರ ಮುಖಿ) ಮತ್ತು ಘರೇ ಬೈರೆ(ಮನೆ ಮತ್ತು ಪ್ರಪಂಚ) ಇವರ ಹೆಸರಾಂತ ಕೃತಿಗಳು. ಅವರು ರಚಿಸಿದ ಕವನಗಳು, ಸಣ್ಣ ಕಥೆಗಳು, ಮತ್ತು ಕಾದಂಬರಿಗಳು ಅವುಗಳ ಸಾಹಿತ್ಯಕ್ಕೆ, ಆಡುಮಾತಿನ ಪ್ರಯೋಗಕ್ಕೆ, ವಿಚಾರಶೀಲ ವಾಸ್ತವಿಕತೆಗೆ ಮತ್ತು ತತ್ವಶಾಸ್ತ್ರದ ಅವಲೋಕನಕ್ಕೆ ಪ್ರಶಂಸನೀಯವಾಗಿವೆ ಎಂದರು.

ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಮಧುಶ್ರೀ  ಪ್ರಾಸ್ತಾವಿಕವಾಗಿ ಮಾತನಾಡಿ, ಕಥೆ, ಕಾದಂಬರಿಗಳನ್ನ ಮಾತ್ರವಲ್ಲದೆ ಠಾಗೋರ್‌ ರಚಿಸಿದ ಎರಡು ಗೀತೆಗಳಿಗೆ ರಾಷ್ಟ್ರ ಮನ್ನಣೆ ಸಿಕ್ಕಿದೆ. ‘ಜನ ಗಣ ಮನ’ ಭಾರತದ ರಾಷ್ಟ್ರಗೀತೆಯಾದರೆ. ‘ಅಮರ್ ಶೋನರ್ ಬಾಂಗ್ಲಾ’ ಬಾಂಗ್ಲಾದೇಶದ ರಾಷ್ಟ್ರಗೀತೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಕಾಶ್ ಸಿ.ಪಿ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪಿ. ಚೈತ್ರ, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಶ್ವೇತ, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಪ್ರಾಧ್ಯಾಪಕರಾದ ಡಾ.ತಾವರೇನಾಯ್ಕ್, ಸ್ವಾತಿ, ಕಿರಣ್, ವೆಂಕಟೇಶ್, ಬಿ. ಶ್ರೀನಿವಾಸ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

9 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

11 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

11 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

13 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

14 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

18 hours ago