ಬಂಗಾಳಿ ಮಹಾನ್ ವಿದ್ವಾಂಸರಾಗಿದ್ದ ಠಾಗೋರ್ ಅವರು ಬಂಗಾಳಿ ಭಾಷೆಯಲ್ಲಿ ಹಲವು ಕಾದರಂಬರಿಗಳನ್ನು ಬರೆದಿದ್ದಾರೆ, ಅಲ್ಲದೆ ಅವರು ಸಂಗೀತಕಾರರಾಗಿ ಮತ್ತು ನಾಟಕ ರಚಿಸುವ ಮೂಲಕ ಅವರು ಜನ ಮಾನಸದಲ್ಲಿ ಸದಾಕಾಲ ಉಳಿದುಕೊಳ್ಳುವ ವ್ಯಕ್ತಿತ್ವದವರು ಎಂದು ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ ಹೇಳಿದರು.
ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ಸಾಂಸ್ಕೃತಿಕ ಘಟಕ, ಐ.ಕ್ಯೂ.ಎ.ಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಠಾಗೋರ್ ನೆನಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತೀಯ ಸಾಂಪ್ರದಾಯಿಕ, ಶಾಸ್ತ್ರೀಯ ಕಠೋರತೆಯ ಚೌಕಟ್ಟಿನಿಂದ ಹೊರ ಬಂದ ಟಾಗೋರ್ ಬಂಗಾಳಿ ಕಲಾ ಪ್ರಕಾರಕ್ಕೆ ಹೊಸ ಮೆರಗು ನೀಡಿದ ಅವರು, ಕಾವ್ಯಕ್ಕೆ ಹೆಸರು ವಾಸಿಯಾದರೂ ಕಾದಂಬರಿಗಳು, ಪ್ರಬಂಧಗಳು, ಸಣ್ಣ ಕಥೆಗಳು, ಪ್ರವಾಸ ಕಥನಗಳು, ನಾಟಕಗಳು, ಮತ್ತು ಸಾವಿರಾರು ಗೀತೆಗಳನ್ನೂ ರಚನೆ ಮಾಡಿದ್ದಾರೆ ಎಂದರು.
ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ ಮಾತನಾಡಿ, ಗೀತಾಂಜಲಿ (ಗೀತೆಗಳು), ಗೋರ (ಸುಂದರ ಮುಖಿ) ಮತ್ತು ಘರೇ ಬೈರೆ(ಮನೆ ಮತ್ತು ಪ್ರಪಂಚ) ಇವರ ಹೆಸರಾಂತ ಕೃತಿಗಳು. ಅವರು ರಚಿಸಿದ ಕವನಗಳು, ಸಣ್ಣ ಕಥೆಗಳು, ಮತ್ತು ಕಾದಂಬರಿಗಳು ಅವುಗಳ ಸಾಹಿತ್ಯಕ್ಕೆ, ಆಡುಮಾತಿನ ಪ್ರಯೋಗಕ್ಕೆ, ವಿಚಾರಶೀಲ ವಾಸ್ತವಿಕತೆಗೆ ಮತ್ತು ತತ್ವಶಾಸ್ತ್ರದ ಅವಲೋಕನಕ್ಕೆ ಪ್ರಶಂಸನೀಯವಾಗಿವೆ ಎಂದರು.
ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಮಧುಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿ, ಕಥೆ, ಕಾದಂಬರಿಗಳನ್ನ ಮಾತ್ರವಲ್ಲದೆ ಠಾಗೋರ್ ರಚಿಸಿದ ಎರಡು ಗೀತೆಗಳಿಗೆ ರಾಷ್ಟ್ರ ಮನ್ನಣೆ ಸಿಕ್ಕಿದೆ. ‘ಜನ ಗಣ ಮನ’ ಭಾರತದ ರಾಷ್ಟ್ರಗೀತೆಯಾದರೆ. ‘ಅಮರ್ ಶೋನರ್ ಬಾಂಗ್ಲಾ’ ಬಾಂಗ್ಲಾದೇಶದ ರಾಷ್ಟ್ರಗೀತೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಕಾಶ್ ಸಿ.ಪಿ, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪಿ. ಚೈತ್ರ, ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಶ್ವೇತ, ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಪ್ರಾಧ್ಯಾಪಕರಾದ ಡಾ.ತಾವರೇನಾಯ್ಕ್, ಸ್ವಾತಿ, ಕಿರಣ್, ವೆಂಕಟೇಶ್, ಬಿ. ಶ್ರೀನಿವಾಸ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…