Categories: ಐಪಿಎಲ್

ಸಂಘಟಿತ ಹೋರಾಟ: ಪ್ಲೇ ಆಫ್ ಗೆ ಲಗ್ಗೆ ಇಟ್ಟ ಸಿ.ಎಸ್.ಕೆ

 

ಆರಂಭಿಕ ಆಟಗಾರರ ಅಬ್ಬರದ ಬ್ಯಾಟಿಂಗ್ ಹಾಗೂ ದೀಪಕ್ ಚಹರ್ ಮಾರಕ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸಿ ಎಸ್ ಕೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿಯ ನಿರ್ಧಾರಕ್ಕೆ ತಕ್ಕಂತೆ ಅರಂಭಿಕರಿಬ್ಬರು ದಿಟ್ಟ ಉತ್ತರ ನೀಡಿದರು. ಯುವ ಆಟಗಾರ ಋತುರಾಜ್ ಗಾಯಕ್ವಾಡ್ (79) ಹಾಗೂ ಡೆವೊನ್ ಕಾನ್ವೆ (87) ಅಬ್ಬರದ ಬ್ಯಾಟಿಂಗ್ ಮೂಲಕ  ತಂಡಕ್ಕೆ ಉತ್ತಮ ಆರಂಭ ನೀಡಿದರು.

ಮೊದಲ ವಿಕೆಟ್ ಗೆ 141 ರನ್ ಗಳ  ಜೊತೆಯಾಟ ಮೂಡಿಬಂದಿತು. ಇದರ ಜೊತೆಯಲ್ಲಿ ಮಾಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಕೂಡ ಈ ಪಂದ್ಯದಲ್ಲಿ ಮಿಂಚಿದರು. ಶಿವಂ ದುಬೆ (22) ಹಾಗೂ ಜಡೇಜಾ (20) ಅಬ್ಬರದ ಆಟದ ನೆರವಿನಿಂದ ಸಿ ಎಸ್ ಕೆ ಮೂರು ವಿಕೆಟ್ ಗಳ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.

ಡೆಲ್ಲಿ ಪರವಾಗಿ ಸಕಾರಿಯ, ನೋಕಿಯಾ, ಮತ್ತು ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು. 224 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ.

ಆರಂಭಿಕ ಆಟಗಾರ ಪೃಥ್ವಿ ಷಾ(5) ಬೇಗನೆ ತಮ್ಮ ವಿಕೆಟ್ ಒಪ್ಪಿಸಿದರು. ಒಂದೆಡೆ ನಾಯಕ ಡೇವಿಡ್ ವಾರ್ನರ್(86) ಆಕರ್ಷಕ ಅರ್ಧ ಶತಕ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಆದರೆ  ಉಳಿದ ಯಾವುದೇ ಬ್ಯಾಟರ್ ಗಳಿಂದ ಉತ್ತಮ ಆಟ ಮೂಡಿಬರಲಿಲ್ಲ.

ಸಿ ಎಸ್ ಕೆ ತಂಡದ ಬೌಲರ್ ಗಳ ಉತ್ತಮ ಬೌಲಿಂಗ್ ನೆರವಿನಿಂದ 20 ಓವರ್ ಗಳ ಅಂತ್ಯಕ್ಕೆ ಡೆಲ್ಲಿ ಕ್ಯಾಪಿಟಲ್ ಕೇವಲ 146 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ದೀಪಕ್ ಚಾಹರ್ 3 ವಿಕೆಟ್,  ಪತಿರಾಣಾ ಹಾಗೂ ತೀಕ್ಷಣ ತಲಾ 2 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು. ಯುವ ಆಟಗಾರ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

1 hour ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

1 hour ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

4 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

12 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

14 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago