ಆರಂಭಿಕ ಆಟಗಾರರ ಅಬ್ಬರದ ಬ್ಯಾಟಿಂಗ್ ಹಾಗೂ ದೀಪಕ್ ಚಹರ್ ಮಾರಕ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸಿ ಎಸ್ ಕೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿಯ ನಿರ್ಧಾರಕ್ಕೆ ತಕ್ಕಂತೆ ಅರಂಭಿಕರಿಬ್ಬರು ದಿಟ್ಟ ಉತ್ತರ ನೀಡಿದರು. ಯುವ ಆಟಗಾರ ಋತುರಾಜ್ ಗಾಯಕ್ವಾಡ್ (79) ಹಾಗೂ ಡೆವೊನ್ ಕಾನ್ವೆ (87) ಅಬ್ಬರದ ಬ್ಯಾಟಿಂಗ್ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದರು.
ಮೊದಲ ವಿಕೆಟ್ ಗೆ 141 ರನ್ ಗಳ ಜೊತೆಯಾಟ ಮೂಡಿಬಂದಿತು. ಇದರ ಜೊತೆಯಲ್ಲಿ ಮಾಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಕೂಡ ಈ ಪಂದ್ಯದಲ್ಲಿ ಮಿಂಚಿದರು. ಶಿವಂ ದುಬೆ (22) ಹಾಗೂ ಜಡೇಜಾ (20) ಅಬ್ಬರದ ಆಟದ ನೆರವಿನಿಂದ ಸಿ ಎಸ್ ಕೆ ಮೂರು ವಿಕೆಟ್ ಗಳ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.
ಆರಂಭಿಕ ಆಟಗಾರ ಪೃಥ್ವಿ ಷಾ(5) ಬೇಗನೆ ತಮ್ಮ ವಿಕೆಟ್ ಒಪ್ಪಿಸಿದರು. ಒಂದೆಡೆ ನಾಯಕ ಡೇವಿಡ್ ವಾರ್ನರ್(86) ಆಕರ್ಷಕ ಅರ್ಧ ಶತಕ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಆದರೆ ಉಳಿದ ಯಾವುದೇ ಬ್ಯಾಟರ್ ಗಳಿಂದ ಉತ್ತಮ ಆಟ ಮೂಡಿಬರಲಿಲ್ಲ.
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…