Categories: ಐಪಿಎಲ್

ಸಂಘಟಿತ ಹೋರಾಟ: ಪ್ಲೇ ಆಫ್ ಗೆ ಲಗ್ಗೆ ಇಟ್ಟ ಸಿ.ಎಸ್.ಕೆ

 

ಆರಂಭಿಕ ಆಟಗಾರರ ಅಬ್ಬರದ ಬ್ಯಾಟಿಂಗ್ ಹಾಗೂ ದೀಪಕ್ ಚಹರ್ ಮಾರಕ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸಿ ಎಸ್ ಕೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿಯ ನಿರ್ಧಾರಕ್ಕೆ ತಕ್ಕಂತೆ ಅರಂಭಿಕರಿಬ್ಬರು ದಿಟ್ಟ ಉತ್ತರ ನೀಡಿದರು. ಯುವ ಆಟಗಾರ ಋತುರಾಜ್ ಗಾಯಕ್ವಾಡ್ (79) ಹಾಗೂ ಡೆವೊನ್ ಕಾನ್ವೆ (87) ಅಬ್ಬರದ ಬ್ಯಾಟಿಂಗ್ ಮೂಲಕ  ತಂಡಕ್ಕೆ ಉತ್ತಮ ಆರಂಭ ನೀಡಿದರು.

ಮೊದಲ ವಿಕೆಟ್ ಗೆ 141 ರನ್ ಗಳ  ಜೊತೆಯಾಟ ಮೂಡಿಬಂದಿತು. ಇದರ ಜೊತೆಯಲ್ಲಿ ಮಾಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಕೂಡ ಈ ಪಂದ್ಯದಲ್ಲಿ ಮಿಂಚಿದರು. ಶಿವಂ ದುಬೆ (22) ಹಾಗೂ ಜಡೇಜಾ (20) ಅಬ್ಬರದ ಆಟದ ನೆರವಿನಿಂದ ಸಿ ಎಸ್ ಕೆ ಮೂರು ವಿಕೆಟ್ ಗಳ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.

ಡೆಲ್ಲಿ ಪರವಾಗಿ ಸಕಾರಿಯ, ನೋಕಿಯಾ, ಮತ್ತು ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು. 224 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ.

ಆರಂಭಿಕ ಆಟಗಾರ ಪೃಥ್ವಿ ಷಾ(5) ಬೇಗನೆ ತಮ್ಮ ವಿಕೆಟ್ ಒಪ್ಪಿಸಿದರು. ಒಂದೆಡೆ ನಾಯಕ ಡೇವಿಡ್ ವಾರ್ನರ್(86) ಆಕರ್ಷಕ ಅರ್ಧ ಶತಕ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಆದರೆ  ಉಳಿದ ಯಾವುದೇ ಬ್ಯಾಟರ್ ಗಳಿಂದ ಉತ್ತಮ ಆಟ ಮೂಡಿಬರಲಿಲ್ಲ.

ಸಿ ಎಸ್ ಕೆ ತಂಡದ ಬೌಲರ್ ಗಳ ಉತ್ತಮ ಬೌಲಿಂಗ್ ನೆರವಿನಿಂದ 20 ಓವರ್ ಗಳ ಅಂತ್ಯಕ್ಕೆ ಡೆಲ್ಲಿ ಕ್ಯಾಪಿಟಲ್ ಕೇವಲ 146 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ದೀಪಕ್ ಚಾಹರ್ 3 ವಿಕೆಟ್,  ಪತಿರಾಣಾ ಹಾಗೂ ತೀಕ್ಷಣ ತಲಾ 2 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು. ಯುವ ಆಟಗಾರ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

3 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

11 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

12 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago