Categories: ಐಪಿಎಲ್

ಸಂಘಟಿತ ಹೋರಾಟ: ಪ್ಲೇ ಆಫ್ ಗೆ ಲಗ್ಗೆ ಇಟ್ಟ ಸಿ.ಎಸ್.ಕೆ

 

ಆರಂಭಿಕ ಆಟಗಾರರ ಅಬ್ಬರದ ಬ್ಯಾಟಿಂಗ್ ಹಾಗೂ ದೀಪಕ್ ಚಹರ್ ಮಾರಕ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸಿ ಎಸ್ ಕೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿಯ ನಿರ್ಧಾರಕ್ಕೆ ತಕ್ಕಂತೆ ಅರಂಭಿಕರಿಬ್ಬರು ದಿಟ್ಟ ಉತ್ತರ ನೀಡಿದರು. ಯುವ ಆಟಗಾರ ಋತುರಾಜ್ ಗಾಯಕ್ವಾಡ್ (79) ಹಾಗೂ ಡೆವೊನ್ ಕಾನ್ವೆ (87) ಅಬ್ಬರದ ಬ್ಯಾಟಿಂಗ್ ಮೂಲಕ  ತಂಡಕ್ಕೆ ಉತ್ತಮ ಆರಂಭ ನೀಡಿದರು.

ಮೊದಲ ವಿಕೆಟ್ ಗೆ 141 ರನ್ ಗಳ  ಜೊತೆಯಾಟ ಮೂಡಿಬಂದಿತು. ಇದರ ಜೊತೆಯಲ್ಲಿ ಮಾಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಕೂಡ ಈ ಪಂದ್ಯದಲ್ಲಿ ಮಿಂಚಿದರು. ಶಿವಂ ದುಬೆ (22) ಹಾಗೂ ಜಡೇಜಾ (20) ಅಬ್ಬರದ ಆಟದ ನೆರವಿನಿಂದ ಸಿ ಎಸ್ ಕೆ ಮೂರು ವಿಕೆಟ್ ಗಳ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.

ಡೆಲ್ಲಿ ಪರವಾಗಿ ಸಕಾರಿಯ, ನೋಕಿಯಾ, ಮತ್ತು ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು. 224 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ.

ಆರಂಭಿಕ ಆಟಗಾರ ಪೃಥ್ವಿ ಷಾ(5) ಬೇಗನೆ ತಮ್ಮ ವಿಕೆಟ್ ಒಪ್ಪಿಸಿದರು. ಒಂದೆಡೆ ನಾಯಕ ಡೇವಿಡ್ ವಾರ್ನರ್(86) ಆಕರ್ಷಕ ಅರ್ಧ ಶತಕ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಆದರೆ  ಉಳಿದ ಯಾವುದೇ ಬ್ಯಾಟರ್ ಗಳಿಂದ ಉತ್ತಮ ಆಟ ಮೂಡಿಬರಲಿಲ್ಲ.

ಸಿ ಎಸ್ ಕೆ ತಂಡದ ಬೌಲರ್ ಗಳ ಉತ್ತಮ ಬೌಲಿಂಗ್ ನೆರವಿನಿಂದ 20 ಓವರ್ ಗಳ ಅಂತ್ಯಕ್ಕೆ ಡೆಲ್ಲಿ ಕ್ಯಾಪಿಟಲ್ ಕೇವಲ 146 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ದೀಪಕ್ ಚಾಹರ್ 3 ವಿಕೆಟ್,  ಪತಿರಾಣಾ ಹಾಗೂ ತೀಕ್ಷಣ ತಲಾ 2 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು. ಯುವ ಆಟಗಾರ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

3 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

4 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

13 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago