Categories: ಐಪಿಎಲ್

ಸಂಘಟಿತ ಹೋರಾಟ: ಪ್ಲೇ ಆಫ್ ಗೆ ಲಗ್ಗೆ ಇಟ್ಟ ಸಿ.ಎಸ್.ಕೆ

 

ಆರಂಭಿಕ ಆಟಗಾರರ ಅಬ್ಬರದ ಬ್ಯಾಟಿಂಗ್ ಹಾಗೂ ದೀಪಕ್ ಚಹರ್ ಮಾರಕ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸಿ ಎಸ್ ಕೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿಯ ನಿರ್ಧಾರಕ್ಕೆ ತಕ್ಕಂತೆ ಅರಂಭಿಕರಿಬ್ಬರು ದಿಟ್ಟ ಉತ್ತರ ನೀಡಿದರು. ಯುವ ಆಟಗಾರ ಋತುರಾಜ್ ಗಾಯಕ್ವಾಡ್ (79) ಹಾಗೂ ಡೆವೊನ್ ಕಾನ್ವೆ (87) ಅಬ್ಬರದ ಬ್ಯಾಟಿಂಗ್ ಮೂಲಕ  ತಂಡಕ್ಕೆ ಉತ್ತಮ ಆರಂಭ ನೀಡಿದರು.

ಮೊದಲ ವಿಕೆಟ್ ಗೆ 141 ರನ್ ಗಳ  ಜೊತೆಯಾಟ ಮೂಡಿಬಂದಿತು. ಇದರ ಜೊತೆಯಲ್ಲಿ ಮಾಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಕೂಡ ಈ ಪಂದ್ಯದಲ್ಲಿ ಮಿಂಚಿದರು. ಶಿವಂ ದುಬೆ (22) ಹಾಗೂ ಜಡೇಜಾ (20) ಅಬ್ಬರದ ಆಟದ ನೆರವಿನಿಂದ ಸಿ ಎಸ್ ಕೆ ಮೂರು ವಿಕೆಟ್ ಗಳ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.

ಡೆಲ್ಲಿ ಪರವಾಗಿ ಸಕಾರಿಯ, ನೋಕಿಯಾ, ಮತ್ತು ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು. 224 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ.

ಆರಂಭಿಕ ಆಟಗಾರ ಪೃಥ್ವಿ ಷಾ(5) ಬೇಗನೆ ತಮ್ಮ ವಿಕೆಟ್ ಒಪ್ಪಿಸಿದರು. ಒಂದೆಡೆ ನಾಯಕ ಡೇವಿಡ್ ವಾರ್ನರ್(86) ಆಕರ್ಷಕ ಅರ್ಧ ಶತಕ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಆದರೆ  ಉಳಿದ ಯಾವುದೇ ಬ್ಯಾಟರ್ ಗಳಿಂದ ಉತ್ತಮ ಆಟ ಮೂಡಿಬರಲಿಲ್ಲ.

ಸಿ ಎಸ್ ಕೆ ತಂಡದ ಬೌಲರ್ ಗಳ ಉತ್ತಮ ಬೌಲಿಂಗ್ ನೆರವಿನಿಂದ 20 ಓವರ್ ಗಳ ಅಂತ್ಯಕ್ಕೆ ಡೆಲ್ಲಿ ಕ್ಯಾಪಿಟಲ್ ಕೇವಲ 146 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ದೀಪಕ್ ಚಾಹರ್ 3 ವಿಕೆಟ್,  ಪತಿರಾಣಾ ಹಾಗೂ ತೀಕ್ಷಣ ತಲಾ 2 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು. ಯುವ ಆಟಗಾರ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

14 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

14 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

15 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

16 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

19 hours ago