Categories: ಐಪಿಎಲ್

ಸಂಘಟಿತ ಹೋರಾಟ: ಪ್ಲೇ ಆಫ್ ಗೆ ಲಗ್ಗೆ ಇಟ್ಟ ಸಿ.ಎಸ್.ಕೆ

 

ಆರಂಭಿಕ ಆಟಗಾರರ ಅಬ್ಬರದ ಬ್ಯಾಟಿಂಗ್ ಹಾಗೂ ದೀಪಕ್ ಚಹರ್ ಮಾರಕ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸಿ ಎಸ್ ಕೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿಯ ನಿರ್ಧಾರಕ್ಕೆ ತಕ್ಕಂತೆ ಅರಂಭಿಕರಿಬ್ಬರು ದಿಟ್ಟ ಉತ್ತರ ನೀಡಿದರು. ಯುವ ಆಟಗಾರ ಋತುರಾಜ್ ಗಾಯಕ್ವಾಡ್ (79) ಹಾಗೂ ಡೆವೊನ್ ಕಾನ್ವೆ (87) ಅಬ್ಬರದ ಬ್ಯಾಟಿಂಗ್ ಮೂಲಕ  ತಂಡಕ್ಕೆ ಉತ್ತಮ ಆರಂಭ ನೀಡಿದರು.

ಮೊದಲ ವಿಕೆಟ್ ಗೆ 141 ರನ್ ಗಳ  ಜೊತೆಯಾಟ ಮೂಡಿಬಂದಿತು. ಇದರ ಜೊತೆಯಲ್ಲಿ ಮಾಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಕೂಡ ಈ ಪಂದ್ಯದಲ್ಲಿ ಮಿಂಚಿದರು. ಶಿವಂ ದುಬೆ (22) ಹಾಗೂ ಜಡೇಜಾ (20) ಅಬ್ಬರದ ಆಟದ ನೆರವಿನಿಂದ ಸಿ ಎಸ್ ಕೆ ಮೂರು ವಿಕೆಟ್ ಗಳ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.

ಡೆಲ್ಲಿ ಪರವಾಗಿ ಸಕಾರಿಯ, ನೋಕಿಯಾ, ಮತ್ತು ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು. 224 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ.

ಆರಂಭಿಕ ಆಟಗಾರ ಪೃಥ್ವಿ ಷಾ(5) ಬೇಗನೆ ತಮ್ಮ ವಿಕೆಟ್ ಒಪ್ಪಿಸಿದರು. ಒಂದೆಡೆ ನಾಯಕ ಡೇವಿಡ್ ವಾರ್ನರ್(86) ಆಕರ್ಷಕ ಅರ್ಧ ಶತಕ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಆದರೆ  ಉಳಿದ ಯಾವುದೇ ಬ್ಯಾಟರ್ ಗಳಿಂದ ಉತ್ತಮ ಆಟ ಮೂಡಿಬರಲಿಲ್ಲ.

ಸಿ ಎಸ್ ಕೆ ತಂಡದ ಬೌಲರ್ ಗಳ ಉತ್ತಮ ಬೌಲಿಂಗ್ ನೆರವಿನಿಂದ 20 ಓವರ್ ಗಳ ಅಂತ್ಯಕ್ಕೆ ಡೆಲ್ಲಿ ಕ್ಯಾಪಿಟಲ್ ಕೇವಲ 146 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ದೀಪಕ್ ಚಾಹರ್ 3 ವಿಕೆಟ್,  ಪತಿರಾಣಾ ಹಾಗೂ ತೀಕ್ಷಣ ತಲಾ 2 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು. ಯುವ ಆಟಗಾರ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

18 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago