ಆರಂಭಿಕ ಆಟಗಾರರ ಅಬ್ಬರದ ಬ್ಯಾಟಿಂಗ್ ಹಾಗೂ ದೀಪಕ್ ಚಹರ್ ಮಾರಕ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸಿ ಎಸ್ ಕೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿಯ ನಿರ್ಧಾರಕ್ಕೆ ತಕ್ಕಂತೆ ಅರಂಭಿಕರಿಬ್ಬರು ದಿಟ್ಟ ಉತ್ತರ ನೀಡಿದರು. ಯುವ ಆಟಗಾರ ಋತುರಾಜ್ ಗಾಯಕ್ವಾಡ್ (79) ಹಾಗೂ ಡೆವೊನ್ ಕಾನ್ವೆ (87) ಅಬ್ಬರದ ಬ್ಯಾಟಿಂಗ್ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದರು.
ಮೊದಲ ವಿಕೆಟ್ ಗೆ 141 ರನ್ ಗಳ ಜೊತೆಯಾಟ ಮೂಡಿಬಂದಿತು. ಇದರ ಜೊತೆಯಲ್ಲಿ ಮಾಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಕೂಡ ಈ ಪಂದ್ಯದಲ್ಲಿ ಮಿಂಚಿದರು. ಶಿವಂ ದುಬೆ (22) ಹಾಗೂ ಜಡೇಜಾ (20) ಅಬ್ಬರದ ಆಟದ ನೆರವಿನಿಂದ ಸಿ ಎಸ್ ಕೆ ಮೂರು ವಿಕೆಟ್ ಗಳ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.
ಆರಂಭಿಕ ಆಟಗಾರ ಪೃಥ್ವಿ ಷಾ(5) ಬೇಗನೆ ತಮ್ಮ ವಿಕೆಟ್ ಒಪ್ಪಿಸಿದರು. ಒಂದೆಡೆ ನಾಯಕ ಡೇವಿಡ್ ವಾರ್ನರ್(86) ಆಕರ್ಷಕ ಅರ್ಧ ಶತಕ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಆದರೆ ಉಳಿದ ಯಾವುದೇ ಬ್ಯಾಟರ್ ಗಳಿಂದ ಉತ್ತಮ ಆಟ ಮೂಡಿಬರಲಿಲ್ಲ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…