ದೊಡ್ಡಬಳ್ಳಾಪುರ: ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು ಎಂದು ದೊಡ್ಡಬಳ್ಳಾಪುರದ ಶೀತಲ ಕೇಂದ್ರದ ವಿಸ್ತರಣಾಧಿಕಾರಿ ಎಂ.ಅನಿತಾ ಹೇಳಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 2023 – 2024 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಶುದ್ಧವಾದ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿದರೆ ಸಂಘವು ಉಳಿಯುತ್ತದೆ ಮತ್ತು ಸರ್ಕಾರದ ಪ್ರೋತ್ಸಾಹ ಧನ ರೈತರಿಗೆ ಬರಲು ಅನುಕೂಲವಾಗುತ್ತದೆ, ರೈತರು ಕೃಷಿ ಚಟುವಟಿಕೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ ಯಾವುದೇ ನಷ್ಟ ಇಲ್ಲ, ರಾಸುಗಳಿಗೆ ಯಾವಾಗಲೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು, ಹಾಲು ಹಿಂಡಲು ಮತ್ತು ಹಾಲನ್ನು ಸಂಘಕ್ಕೆ ತರಲು ಸ್ಟೇನ್ಲೆಸ್ ಸ್ಟೀಲ್ ಪಾತ್ರೆಗಳನ್ನೇ ಬಳಸಿದರೆ ಬಹಳ ಒಳ್ಳೆಯದು, ಹಾಲು ಕರೆಯುವ ಮೊದಲು ಕೈಗಳನ್ನು ಸಾಬೂನಿನಿಂದ ತೊಳೆದುಕೊಂಡು ಕೆಚ್ಚಲನ್ನು ಶುದ್ಧ ನೀರಿನಿಂದ ತೊಳೆದು ಒಣ ಬಟ್ಟೆಯಿಂದ ಒರೆಸಬೇಕು ಎಂದರು.
ಸಂಘದ ಅಧ್ಯಕ್ಷರಾದ ಮನಿಅಂಜಿನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಹೊರ ರಾಜ್ಯಗಳಿಗೆ ಅಲ್ಲದೆ ಪಾಶ್ಚಾತ್ಯ ದೇಶಗಳಲ್ಲಿ ಮಾರುಕಟ್ಟೆಯನ್ನು ವಿಸ್ತರಿಸಿರುವುದು ನಂದಿನಿ ಹಾಲಿನ ಉತ್ಕೃಷ್ಟತೆಗೆ ಸಾಕ್ಷಿ, ಆರೋಗ್ಯವಂತ ರಾಸುವಿನ ಶುದ್ಧ ಗುಣಮಟ್ಟದ ಹಾಲನ್ನು ಮಾತ್ರ ಸಂಘವು ತೆಗೆದುಕೊಳ್ಳುತ್ತದೆ, ಕೆಚ್ಚಲು ಬಾವು ಇರುವ ಹಾಲನ್ನು ಸಂಘಕ್ಕೆ ಸರಬರಾಜು ಮಾಡಬಾರದು, ಉತ್ತಮ ಗುಣಮಟ್ಟದ ಹಾಲಿಗೆ ಮಾತ್ರ 5 ರೂ. ಪ್ರೋತ್ಸಾಹ ಧನ ಬರುತ್ತದೆ, ಬಮೂಲ್ ನಿಂದ ರೈತರಿಗೆ ಜೋಳ, ರಾಸುಗಳಿಗೆ ಮ್ಯಾಟ್, ಮೇವು ಕತ್ತರಿಸುವ ಯಂತ್ರಗಳು, ಹಾಲು ಕರೆಯುವ ಯಂತ್ರಗಳು, ಸಂಘದ ಕಟ್ಟಡ ಕಟ್ಟಲು ಕೆ.ಎಂ.ಎಫ್ ನಿಂದ ಅನುದಾನಗಳು, ಬೆಂಗಳೂರು ಹಾಲು ಒಕ್ಕೂಟದಿಂದ ಅನುದಾನಗಳು, ರೈತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ,ನೂತನ ಕಟ್ಟಡಗಳಿಗೆ ಪೀಠೋಪಕರಣಗಳು, ಪಶು ಆಹಾರ, ಸಂಘದ ಒಳಿತಿಗಾಗಿ ಸಾಲ ಸೌಲಭ್ಯ ಮತ್ತಿತರ ಸೇವೆ, ಸೌಲಭ್ಯಗಳನ್ನು ರೈತರು ಮತ್ತು ಸಂಘಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಸಂಘದ ಮುಖ್ಯಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಹನುಮಂತ ಗೌಡ, ನಿರ್ದೇಶಕರಾದ ಎಂ.ರಾಮಪ್ಪ, ಎಂ.ಮಾರಪ್ಪ, ಕೃಷ್ಣಪ್ಪ, ಮುನಿಕೃಷ್ಣ, ಅಕ್ಕಯಮ್ಮ, ನಾರಾಯಣಪ್ಪ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಭಾಗ್ಯಮ್ಮ, ಮತ್ತಿತರರು ಹಾಜರಿದ್ದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…