ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು-ಎಂ.ಅನಿತಾ

ದೊಡ್ಡಬಳ್ಳಾಪುರ: ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು ಎಂದು ದೊಡ್ಡಬಳ್ಳಾಪುರದ ಶೀತಲ ಕೇಂದ್ರದ ವಿಸ್ತರಣಾಧಿಕಾರಿ ಎಂ.ಅನಿತಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 2023 – 2024 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಶುದ್ಧವಾದ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿದರೆ ಸಂಘವು ಉಳಿಯುತ್ತದೆ ಮತ್ತು ಸರ್ಕಾರದ ಪ್ರೋತ್ಸಾಹ ಧನ ರೈತರಿಗೆ ಬರಲು ಅನುಕೂಲವಾಗುತ್ತದೆ, ರೈತರು ಕೃಷಿ ಚಟುವಟಿಕೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ  ಯಾವುದೇ ನಷ್ಟ ಇಲ್ಲ, ರಾಸುಗಳಿಗೆ ಯಾವಾಗಲೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು, ಹಾಲು ಹಿಂಡಲು ಮತ್ತು ಹಾಲನ್ನು ಸಂಘಕ್ಕೆ ತರಲು ಸ್ಟೇನ್‌ಲೆಸ್ ಸ್ಟೀಲ್ ಪಾತ್ರೆಗಳನ್ನೇ ಬಳಸಿದರೆ ಬಹಳ ಒಳ್ಳೆಯದು, ಹಾಲು ಕರೆಯುವ ಮೊದಲು ಕೈಗಳನ್ನು ಸಾಬೂನಿನಿಂದ ತೊಳೆದುಕೊಂಡು ಕೆಚ್ಚಲನ್ನು ಶುದ್ಧ ನೀರಿನಿಂದ ತೊಳೆದು ಒಣ ಬಟ್ಟೆಯಿಂದ ಒರೆಸಬೇಕು ಎಂದರು.

ಸಂಘದ ಅಧ್ಯಕ್ಷರಾದ ಮನಿಅಂಜಿನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ನಂದಿನಿ  ಹಾಲು ಮತ್ತು ಹಾಲಿನ ಉತ್ಪನ್ನಗಳು ಹೊರ ರಾಜ್ಯಗಳಿಗೆ ಅಲ್ಲದೆ ಪಾಶ್ಚಾತ್ಯ ದೇಶಗಳಲ್ಲಿ ಮಾರುಕಟ್ಟೆಯನ್ನು ವಿಸ್ತರಿಸಿರುವುದು ನಂದಿನಿ ಹಾಲಿನ ಉತ್ಕೃಷ್ಟತೆಗೆ ಸಾಕ್ಷಿ, ಆರೋಗ್ಯವಂತ ರಾಸುವಿನ ಶುದ್ಧ ಗುಣಮಟ್ಟದ ಹಾಲನ್ನು ಮಾತ್ರ ಸಂಘವು ತೆಗೆದುಕೊಳ್ಳುತ್ತದೆ, ಕೆಚ್ಚಲು ಬಾವು ಇರುವ ಹಾಲನ್ನು ಸಂಘಕ್ಕೆ ಸರಬರಾಜು ಮಾಡಬಾರದು, ಉತ್ತಮ ಗುಣಮಟ್ಟದ ಹಾಲಿಗೆ ಮಾತ್ರ 5 ರೂ. ಪ್ರೋತ್ಸಾಹ ಧನ ಬರುತ್ತದೆ, ಬಮೂಲ್ ನಿಂದ ರೈತರಿಗೆ ಜೋಳ, ರಾಸುಗಳಿಗೆ ಮ್ಯಾಟ್, ಮೇವು ಕತ್ತರಿಸುವ ಯಂತ್ರಗಳು, ಹಾಲು ಕರೆಯುವ ಯಂತ್ರಗಳು, ಸಂಘದ ಕಟ್ಟಡ ಕಟ್ಟಲು ಕೆ.ಎಂ.ಎಫ್ ನಿಂದ ಅನುದಾನಗಳು, ಬೆಂಗಳೂರು ಹಾಲು ಒಕ್ಕೂಟದಿಂದ ಅನುದಾನಗಳು, ರೈತರ ಮಕ್ಕಳಿಗೆ  ಪ್ರತಿಭಾ ಪುರಸ್ಕಾರ,ನೂತನ ಕಟ್ಟಡಗಳಿಗೆ  ಪೀಠೋಪಕರಣಗಳು, ಪಶು ಆಹಾರ,   ಸಂಘದ ಒಳಿತಿಗಾಗಿ ಸಾಲ ಸೌಲಭ್ಯ ಮತ್ತಿತರ ಸೇವೆ, ಸೌಲಭ್ಯಗಳನ್ನು ರೈತರು ಮತ್ತು ಸಂಘಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸಂಘದ ಮುಖ್ಯಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಹನುಮಂತ ಗೌಡ, ನಿರ್ದೇಶಕರಾದ ಎಂ.ರಾಮಪ್ಪ, ಎಂ.ಮಾರಪ್ಪ, ಕೃಷ್ಣಪ್ಪ, ಮುನಿಕೃಷ್ಣ, ಅಕ್ಕಯಮ್ಮ, ನಾರಾಯಣಪ್ಪ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಭಾಗ್ಯಮ್ಮ, ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago