ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು-ಎಂ.ಅನಿತಾ

ದೊಡ್ಡಬಳ್ಳಾಪುರ: ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು ಎಂದು ದೊಡ್ಡಬಳ್ಳಾಪುರದ ಶೀತಲ ಕೇಂದ್ರದ ವಿಸ್ತರಣಾಧಿಕಾರಿ ಎಂ.ಅನಿತಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 2023 – 2024 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಶುದ್ಧವಾದ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿದರೆ ಸಂಘವು ಉಳಿಯುತ್ತದೆ ಮತ್ತು ಸರ್ಕಾರದ ಪ್ರೋತ್ಸಾಹ ಧನ ರೈತರಿಗೆ ಬರಲು ಅನುಕೂಲವಾಗುತ್ತದೆ, ರೈತರು ಕೃಷಿ ಚಟುವಟಿಕೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ  ಯಾವುದೇ ನಷ್ಟ ಇಲ್ಲ, ರಾಸುಗಳಿಗೆ ಯಾವಾಗಲೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು, ಹಾಲು ಹಿಂಡಲು ಮತ್ತು ಹಾಲನ್ನು ಸಂಘಕ್ಕೆ ತರಲು ಸ್ಟೇನ್‌ಲೆಸ್ ಸ್ಟೀಲ್ ಪಾತ್ರೆಗಳನ್ನೇ ಬಳಸಿದರೆ ಬಹಳ ಒಳ್ಳೆಯದು, ಹಾಲು ಕರೆಯುವ ಮೊದಲು ಕೈಗಳನ್ನು ಸಾಬೂನಿನಿಂದ ತೊಳೆದುಕೊಂಡು ಕೆಚ್ಚಲನ್ನು ಶುದ್ಧ ನೀರಿನಿಂದ ತೊಳೆದು ಒಣ ಬಟ್ಟೆಯಿಂದ ಒರೆಸಬೇಕು ಎಂದರು.

ಸಂಘದ ಅಧ್ಯಕ್ಷರಾದ ಮನಿಅಂಜಿನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ನಂದಿನಿ  ಹಾಲು ಮತ್ತು ಹಾಲಿನ ಉತ್ಪನ್ನಗಳು ಹೊರ ರಾಜ್ಯಗಳಿಗೆ ಅಲ್ಲದೆ ಪಾಶ್ಚಾತ್ಯ ದೇಶಗಳಲ್ಲಿ ಮಾರುಕಟ್ಟೆಯನ್ನು ವಿಸ್ತರಿಸಿರುವುದು ನಂದಿನಿ ಹಾಲಿನ ಉತ್ಕೃಷ್ಟತೆಗೆ ಸಾಕ್ಷಿ, ಆರೋಗ್ಯವಂತ ರಾಸುವಿನ ಶುದ್ಧ ಗುಣಮಟ್ಟದ ಹಾಲನ್ನು ಮಾತ್ರ ಸಂಘವು ತೆಗೆದುಕೊಳ್ಳುತ್ತದೆ, ಕೆಚ್ಚಲು ಬಾವು ಇರುವ ಹಾಲನ್ನು ಸಂಘಕ್ಕೆ ಸರಬರಾಜು ಮಾಡಬಾರದು, ಉತ್ತಮ ಗುಣಮಟ್ಟದ ಹಾಲಿಗೆ ಮಾತ್ರ 5 ರೂ. ಪ್ರೋತ್ಸಾಹ ಧನ ಬರುತ್ತದೆ, ಬಮೂಲ್ ನಿಂದ ರೈತರಿಗೆ ಜೋಳ, ರಾಸುಗಳಿಗೆ ಮ್ಯಾಟ್, ಮೇವು ಕತ್ತರಿಸುವ ಯಂತ್ರಗಳು, ಹಾಲು ಕರೆಯುವ ಯಂತ್ರಗಳು, ಸಂಘದ ಕಟ್ಟಡ ಕಟ್ಟಲು ಕೆ.ಎಂ.ಎಫ್ ನಿಂದ ಅನುದಾನಗಳು, ಬೆಂಗಳೂರು ಹಾಲು ಒಕ್ಕೂಟದಿಂದ ಅನುದಾನಗಳು, ರೈತರ ಮಕ್ಕಳಿಗೆ  ಪ್ರತಿಭಾ ಪುರಸ್ಕಾರ,ನೂತನ ಕಟ್ಟಡಗಳಿಗೆ  ಪೀಠೋಪಕರಣಗಳು, ಪಶು ಆಹಾರ,   ಸಂಘದ ಒಳಿತಿಗಾಗಿ ಸಾಲ ಸೌಲಭ್ಯ ಮತ್ತಿತರ ಸೇವೆ, ಸೌಲಭ್ಯಗಳನ್ನು ರೈತರು ಮತ್ತು ಸಂಘಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸಂಘದ ಮುಖ್ಯಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಹನುಮಂತ ಗೌಡ, ನಿರ್ದೇಶಕರಾದ ಎಂ.ರಾಮಪ್ಪ, ಎಂ.ಮಾರಪ್ಪ, ಕೃಷ್ಣಪ್ಪ, ಮುನಿಕೃಷ್ಣ, ಅಕ್ಕಯಮ್ಮ, ನಾರಾಯಣಪ್ಪ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಭಾಗ್ಯಮ್ಮ, ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

1 hour ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

4 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

15 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

16 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

16 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

19 hours ago