ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು-ಎಂ.ಅನಿತಾ

ದೊಡ್ಡಬಳ್ಳಾಪುರ: ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು ಎಂದು ದೊಡ್ಡಬಳ್ಳಾಪುರದ ಶೀತಲ ಕೇಂದ್ರದ ವಿಸ್ತರಣಾಧಿಕಾರಿ ಎಂ.ಅನಿತಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 2023 – 2024 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಶುದ್ಧವಾದ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿದರೆ ಸಂಘವು ಉಳಿಯುತ್ತದೆ ಮತ್ತು ಸರ್ಕಾರದ ಪ್ರೋತ್ಸಾಹ ಧನ ರೈತರಿಗೆ ಬರಲು ಅನುಕೂಲವಾಗುತ್ತದೆ, ರೈತರು ಕೃಷಿ ಚಟುವಟಿಕೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ  ಯಾವುದೇ ನಷ್ಟ ಇಲ್ಲ, ರಾಸುಗಳಿಗೆ ಯಾವಾಗಲೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು, ಹಾಲು ಹಿಂಡಲು ಮತ್ತು ಹಾಲನ್ನು ಸಂಘಕ್ಕೆ ತರಲು ಸ್ಟೇನ್‌ಲೆಸ್ ಸ್ಟೀಲ್ ಪಾತ್ರೆಗಳನ್ನೇ ಬಳಸಿದರೆ ಬಹಳ ಒಳ್ಳೆಯದು, ಹಾಲು ಕರೆಯುವ ಮೊದಲು ಕೈಗಳನ್ನು ಸಾಬೂನಿನಿಂದ ತೊಳೆದುಕೊಂಡು ಕೆಚ್ಚಲನ್ನು ಶುದ್ಧ ನೀರಿನಿಂದ ತೊಳೆದು ಒಣ ಬಟ್ಟೆಯಿಂದ ಒರೆಸಬೇಕು ಎಂದರು.

ಸಂಘದ ಅಧ್ಯಕ್ಷರಾದ ಮನಿಅಂಜಿನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ನಂದಿನಿ  ಹಾಲು ಮತ್ತು ಹಾಲಿನ ಉತ್ಪನ್ನಗಳು ಹೊರ ರಾಜ್ಯಗಳಿಗೆ ಅಲ್ಲದೆ ಪಾಶ್ಚಾತ್ಯ ದೇಶಗಳಲ್ಲಿ ಮಾರುಕಟ್ಟೆಯನ್ನು ವಿಸ್ತರಿಸಿರುವುದು ನಂದಿನಿ ಹಾಲಿನ ಉತ್ಕೃಷ್ಟತೆಗೆ ಸಾಕ್ಷಿ, ಆರೋಗ್ಯವಂತ ರಾಸುವಿನ ಶುದ್ಧ ಗುಣಮಟ್ಟದ ಹಾಲನ್ನು ಮಾತ್ರ ಸಂಘವು ತೆಗೆದುಕೊಳ್ಳುತ್ತದೆ, ಕೆಚ್ಚಲು ಬಾವು ಇರುವ ಹಾಲನ್ನು ಸಂಘಕ್ಕೆ ಸರಬರಾಜು ಮಾಡಬಾರದು, ಉತ್ತಮ ಗುಣಮಟ್ಟದ ಹಾಲಿಗೆ ಮಾತ್ರ 5 ರೂ. ಪ್ರೋತ್ಸಾಹ ಧನ ಬರುತ್ತದೆ, ಬಮೂಲ್ ನಿಂದ ರೈತರಿಗೆ ಜೋಳ, ರಾಸುಗಳಿಗೆ ಮ್ಯಾಟ್, ಮೇವು ಕತ್ತರಿಸುವ ಯಂತ್ರಗಳು, ಹಾಲು ಕರೆಯುವ ಯಂತ್ರಗಳು, ಸಂಘದ ಕಟ್ಟಡ ಕಟ್ಟಲು ಕೆ.ಎಂ.ಎಫ್ ನಿಂದ ಅನುದಾನಗಳು, ಬೆಂಗಳೂರು ಹಾಲು ಒಕ್ಕೂಟದಿಂದ ಅನುದಾನಗಳು, ರೈತರ ಮಕ್ಕಳಿಗೆ  ಪ್ರತಿಭಾ ಪುರಸ್ಕಾರ,ನೂತನ ಕಟ್ಟಡಗಳಿಗೆ  ಪೀಠೋಪಕರಣಗಳು, ಪಶು ಆಹಾರ,   ಸಂಘದ ಒಳಿತಿಗಾಗಿ ಸಾಲ ಸೌಲಭ್ಯ ಮತ್ತಿತರ ಸೇವೆ, ಸೌಲಭ್ಯಗಳನ್ನು ರೈತರು ಮತ್ತು ಸಂಘಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸಂಘದ ಮುಖ್ಯಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಹನುಮಂತ ಗೌಡ, ನಿರ್ದೇಶಕರಾದ ಎಂ.ರಾಮಪ್ಪ, ಎಂ.ಮಾರಪ್ಪ, ಕೃಷ್ಣಪ್ಪ, ಮುನಿಕೃಷ್ಣ, ಅಕ್ಕಯಮ್ಮ, ನಾರಾಯಣಪ್ಪ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಭಾಗ್ಯಮ್ಮ, ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

3 hours ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

2 days ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago