ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ 2024-25ನೇ ಸಾಲಿನಲ್ಲಿ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಚಾರಿ ಕುರಿಗಾರರ ಗುರುತಿನ ಚೀಟಿ ಪಡೆಯಲು, ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿದ್ದಲ್ಲಿ ಅರ್ಹರಿರುತ್ತಾರೆ. ಸಂಚಾರಿ ಕುರಿಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾಲಯ/ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆಗಳ ಪಶು ವೈದ್ಯಾಧಿಕಾರಿಗಳು/ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು ಹಾಗೂ ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳಿಂದ ಕನಿಷ್ಠ 20 ಕುರಿ/ಮೇಕೆಗಳನ್ನು ಹೊಂದಿರುವ ದೃಢೀಕರಣ ಪತ್ರ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅದೇ ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆ/ಕಛೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಉಪ ನಿರ್ದೇಶಕರ ಕಛೇರಿ, ಬೆಂಗಳೂರು ವಿಭಾಗ, ಮೊಬೈಲ್ ಸಂಖ್ಯೆ: 9740171450 ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…