ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ 2024-25ನೇ ಸಾಲಿನಲ್ಲಿ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಚಾರಿ ಕುರಿಗಾರರ ಗುರುತಿನ ಚೀಟಿ ಪಡೆಯಲು, ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿದ್ದಲ್ಲಿ ಅರ್ಹರಿರುತ್ತಾರೆ. ಸಂಚಾರಿ ಕುರಿಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾಲಯ/ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆಗಳ ಪಶು ವೈದ್ಯಾಧಿಕಾರಿಗಳು/ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು ಹಾಗೂ ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳಿಂದ ಕನಿಷ್ಠ 20 ಕುರಿ/ಮೇಕೆಗಳನ್ನು ಹೊಂದಿರುವ ದೃಢೀಕರಣ ಪತ್ರ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅದೇ ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆ/ಕಛೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಉಪ ನಿರ್ದೇಶಕರ ಕಛೇರಿ, ಬೆಂಗಳೂರು ವಿಭಾಗ, ಮೊಬೈಲ್ ಸಂಖ್ಯೆ: 9740171450 ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…