ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ 2024-25ನೇ ಸಾಲಿನಲ್ಲಿ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಚಾರಿ ಕುರಿಗಾರರ ಗುರುತಿನ ಚೀಟಿ ಪಡೆಯಲು, ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿದ್ದಲ್ಲಿ ಅರ್ಹರಿರುತ್ತಾರೆ. ಸಂಚಾರಿ ಕುರಿಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾಲಯ/ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆಗಳ ಪಶು ವೈದ್ಯಾಧಿಕಾರಿಗಳು/ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು ಹಾಗೂ ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳಿಂದ ಕನಿಷ್ಠ 20 ಕುರಿ/ಮೇಕೆಗಳನ್ನು ಹೊಂದಿರುವ ದೃಢೀಕರಣ ಪತ್ರ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅದೇ ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆ/ಕಛೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಉಪ ನಿರ್ದೇಶಕರ ಕಛೇರಿ, ಬೆಂಗಳೂರು ವಿಭಾಗ, ಮೊಬೈಲ್ ಸಂಖ್ಯೆ: 9740171450 ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…