ಸಂಚಾರಿ ನಿಯಮಗಳ ಪಾಲನೆ ಕಡ್ಡಾಯ-ನಗರ ಪೊಲೀಸ್ ಠಾಣೆ ಸಬ್‌ ಇನ್ಸ್ ಪೆಕ್ಟರ್ ಕೃಷ್ಣಪ್ಪ

ವಾಹನ ಚಲಾಯಿಸುವವರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮೂಲಕ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಪ್ರಯತ್ನಿಸಬೇಕು ಎಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಬ್‌ ಇನ್ಸ್ ಪೆಕ್ಟರ್ ಕೃಷ್ಣಪ್ಪ ತಿಳಿಸಿದರು.

ನಗರದ ಕಾರ್ಮಲ್ ಜ್ಯೋತಿ ಶಾಲೆಯಲ್ಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನಡೆದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಸ್ತೆ ಸುರಕ್ಷತೆ ಬಗೆಗಿನ ಜಾಗೃತಿ ಕಾರ್ಯಕ್ರಮಗಳು ಒಂದೇ ದಿನಕ್ಕೆ ಸೀಮಿತವಾಗದೆ ಪ್ರತಿದಿನ ಕೂಡ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬರು ದ್ವಿಚಕ್ರ ವಾಹನ ಚಲಾಯಿಸುವ ವೇಳೆಯಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಬಳಸಬೇಕು. ಅದರಲ್ಲೂ ಐಎಸ್‌ಐ ಗುರುತು ಇರುವ ಹೆಲ್ಮೆಟ್ ಬಳಸಬೇಕು. ಇದರಿಂದ ಅಪಘಾತಗಳು ನಡೆದ ಸಂದರ್ಭದಲ್ಲಿ ರಕ್ಷಣೆ ಸಿಗುತ್ತದೆ. ಇನ್ನು ರಸ್ತೆಗಳಲ್ಲಿ ಅಳವಡಿಸಲಾಗುವ ಸೂಚನಾ ಸಿಗ್ನಲ್‌ಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಾಕಷ್ಟು ಸಾವು-ನೋವುಗಳು ಕಂಡುಬರುತ್ತಿವೆ. ಗಾಯಗಳಾದ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿಯನ್ನು ಚಿಕಿತ್ಸೆಗಾಗಿ ಬಳಸಬೇಕಾ ಪರಿಸ್ಥಿತಿ ಎದುರಾಗುತ್ತದೆ. ಇದರಿಂದ ಈ ಬಗ್ಗೆ ಸಾಕಷ್ಟು ಎಚ್ಚರವಹಿಸಬೇಕು. ಸಂಚಾರಿ ನಿಯಮಗಳು ಅದರ ಪಾಲನೆಗಾಗಿ ಮಕ್ಕಳು ಮನೆಗಳಲ್ಲಿ ತಮ್ಮ ಪೋಷಕರಿಗೆ ತಿಳಿಸಬೇಕು. ಈ ಮೂಲಕ ಮನೆಯಿಂದಲ್ಲೇ ಬದಲಾವಣೆ ಆರಂಭವಾಗಬೇಕು ಎಂದರು.

ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಸಂಚಾರಿ ನಿಯಮಗಳ ಪಾಲನೆಯೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖವಾಗಿದೆ.
ಈ ಬಗ್ಗೆ ಶಾಲಾ, ಕಾಲೇಜು ಹಂತಗಳಲ್ಲಿ ಜಾಗೃತಿ ಮೂಡಿಸುವುದರಿಂದ ಮಕ್ಕಳು ತಾವು ಕಲಿಯುವುದರೊಂದಿಗೆ ತಮ್ಮ ಮನೆ, ನೆರೆಹೊರೆಯವರಿಗೂ ತಿಳಿಸುವಂತೆ ಜಾಗೃತಿ ಮೂಡಿಸಬೇಕು. ವಾಹನ ಚಲಾವಣೆಯ ಸಂದರ್ಭದಲ್ಲಿ ವೇಗ ಮಿತಿ ಇರಬೇಕು. ಜತೆಗೆ ಹೆಲ್ಮೆಟ್, ಸೀಟ್ ಬೆಲ್ಟ್ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮಕ್ಕಳು ರಸ್ತೆಯಲ್ಲಿ ವಾಹನ ಸವಾರರಿಗೆ ಗುಲಾಬಿ ಹೂ ನೀಡುವ ಬಗ್ಗೆ ಸಂಚಾರಿ ನಿಯಮಗಳ ಪಾಲಿಸುವಂತೆ ಮನವಿ ಮಾಡಲಾಯಿತು.

ಈ ವೇಳೆಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ತರಬೇತಿ ಆಯುಕ್ತರು ಅರುಣಾಮಾಲ್, ಸಹಾಯಕ ಜಿಲ್ಲಾ ಆಯುಕ್ತರು ವೆಂಕಟರಾಜು, ಜಿಲ್ಲಾ ಆಯೋಜಕ ಶಿವಕುಮಾರ್, ತಾಲೂಕು ಕಾರ್ಯದರ್ಶಿ ಆಂಜಿನಪ್ಪ , ತಾಲೂಕು ಖಜಾಂಜಿ ಜೈಕುಮಾರ್ , ಕಾರ್ಮಲ್ ಜ್ಯೋತಿ ಶಾಲೆಯ ಮುಖಂಡ ಅಪೂರ್ವ ಪ್ರಭಾಕರ್, ಈ ವೇಳೆಯಲ್ಲಿ ಸ್ಕೌಟ್ ಮತ್ತು ಗೈಡ್ಸ್ನ ವತ್ಸಲ, ನಗರಸಭಾ ಸದಸ್ಯೆ ವತ್ಸಲ ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

24 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago