Categories: Crime

ಸಂಪತ್ ನಾಯರ್ ಕೊಲೆ ಪ್ರಕರಣ: ಕೊಲೆ‌ ಆರೋಪಿಗಳ ಬಂಧನ: ಇಷ್ಟಕ್ಕೂ ಸಂಪತ್ ನಾಯರ್ ಕೊಲೆ‌ಯಾಗಿದ್ದು‌ ಯಾರಿಂದ‌, ಏಕೆ…?

ಕೊಡಗಿನ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.10ರಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ  ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44) ಕಿರಣ್ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ.

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚುರೂಪಿಸಿದ ಆರೋಪಿ ಸಂಗೀತಾ, ಸಂಪತ್ ನಾಯರ್ ನನ್ನು ಸೋಮವಾರಪೇಟೆಯ ಹಾನಗಳ್ ಗೆ ಮೇ.9ರಂದು ರಂದು ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡು, ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಕೊವಿಯಿಂದ ಬೆದರಿಸಿ ದೊಣ್ಣೆಯಿಂದ, ಹೊಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.

ಕೊಲೆಯನ್ನು ಮರೆಮಾಚಲು ಮೃತ ದೇಹವನ್ನು, ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಮೃತ ದೇಹವನ್ನು ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಬೆಂಗಳೂರಿನಿಂದ ಬೇರೊಂದು ಕಾರನ್ನು ಈ ಕೃತ್ಯಕ್ಕಾಗಿ ಬಳಸಲು ತಂದಿದ್ದ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು.

ಮೇ.16 ರಂದು ಪೊಲೀಸರಿಗೆ ದೊರೆತ ಖಚಿತ ವರ್ತಮಾನದಲ್ಲಿ ಕಿರಣನನ್ನು ಬೆಂಗಳೂರಿನಲ್ಲಿ ಬಂಧಿಸಿ , ಆರೋಪಿ ಗಣಪತಿಯನ್ನು ಮೇ.17ರಂದು ಬೆಳ್ತಂಗಡಿಯಲ್ಲಿ ಬಂಧಿಸಿ, ಮೇ.18ರಂದು ಕಿರಣನ ಹೆಂಡತಿ ಸಂಗೀತಾಳನ್ನು ಸೋಮವಾರಪೇಟೆಯಲ್ಲಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ, ತಾವು ಮಾಡಿದ ಕೃತ್ಯವನ್ನು ಒಪ್ಪಿಕೊಂಡು ಘಟನೆಯ ಬಗ್ಗೆ ವಿವರ ನೀಡಿದ್ದಾರೆ.

ಈ ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನು ಕೂಡ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮರಾಜನ್ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಟನೆಯ ವಿವರ ನೀಡಿದರು.

ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು,  ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು.

ಕಿರಣನ ಪತ್ನಿ ಸಂಗೀತಳ ವಿಡಿಯೋ ಒಂದು ಸಂಪತ್ ಬಳಿ ಇದ್ದು ಇದನ್ನು ಇಟ್ಟುಕೊಂಡು ಆತ ಆಗಾಗ ಬ್ಲಾಕ್ಮೇಲ್ ಮಾಡುತ್ತಿದ್ದನು.

ಈ ಹಿಂದೆ ಸಂಗೀತಾ ಕೆಲವು ತಿಂಗಳುಗಳ ಕಾಲ ಸಂಪತ್ತೊಂದಿಗೆ ಬಾಳ್ವೆ ನಡೆಸುತ್ತಿದ್ದಳು. ನಂತರ ಪುನಹ ತನ್ನ ಮೊದಲ ಗಂಡ ಕಿರಣದೊಂದಿಗೆ ಬಾಳ್ವೆ ನಡೆಸುತ್ತಿದ್ದಾಳೆ.

ಆಕೆ ಪಡೆದುಕೊಂಡ 20 ಲಕ್ಷ ನೀಡದಿದ್ದಾಗ ಸಂಪತ್ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ಕುಪಿತರಾದ ಕಿರಣ್ ಹಾಗೂ ಸಂಗೀತಾ, ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಆತನನ್ನು ಬರಮಾಡಿಕೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಹೇಳಲಾಗಿದೆ.

ಗುತ್ತಿಗೆದಾರನಾದ ಸಂಪತ್ ನಾಯರ್ ಸ್ತಿಥಿವಂತುನೂ ಕೂಡ ಆಗಿದ್ದನು. ಕೆಲವೊಂದು ಕೆಟ್ಟಚಾಳಿಗೆ ಒಳಗಾಗಿ ತನ್ನ ಸ್ನೇಹಿತರಿಂದಲೆ ಕೊಲೆಯಾಗಿದ್ದಾನೆ.

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ…

2 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

3 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

6 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

7 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago