ಕೊಡಗಿನ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.10ರಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44) ಕಿರಣ್ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚುರೂಪಿಸಿದ ಆರೋಪಿ ಸಂಗೀತಾ, ಸಂಪತ್ ನಾಯರ್ ನನ್ನು ಸೋಮವಾರಪೇಟೆಯ ಹಾನಗಳ್ ಗೆ ಮೇ.9ರಂದು ರಂದು ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡು, ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಕೊವಿಯಿಂದ ಬೆದರಿಸಿ ದೊಣ್ಣೆಯಿಂದ, ಹೊಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.
ಕೊಲೆಯನ್ನು ಮರೆಮಾಚಲು ಮೃತ ದೇಹವನ್ನು, ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಮೃತ ದೇಹವನ್ನು ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಬೆಂಗಳೂರಿನಿಂದ ಬೇರೊಂದು ಕಾರನ್ನು ಈ ಕೃತ್ಯಕ್ಕಾಗಿ ಬಳಸಲು ತಂದಿದ್ದ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು.
ಮೇ.16 ರಂದು ಪೊಲೀಸರಿಗೆ ದೊರೆತ ಖಚಿತ ವರ್ತಮಾನದಲ್ಲಿ ಕಿರಣನನ್ನು ಬೆಂಗಳೂರಿನಲ್ಲಿ ಬಂಧಿಸಿ , ಆರೋಪಿ ಗಣಪತಿಯನ್ನು ಮೇ.17ರಂದು ಬೆಳ್ತಂಗಡಿಯಲ್ಲಿ ಬಂಧಿಸಿ, ಮೇ.18ರಂದು ಕಿರಣನ ಹೆಂಡತಿ ಸಂಗೀತಾಳನ್ನು ಸೋಮವಾರಪೇಟೆಯಲ್ಲಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ, ತಾವು ಮಾಡಿದ ಕೃತ್ಯವನ್ನು ಒಪ್ಪಿಕೊಂಡು ಘಟನೆಯ ಬಗ್ಗೆ ವಿವರ ನೀಡಿದ್ದಾರೆ.
ಈ ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನು ಕೂಡ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮರಾಜನ್ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಟನೆಯ ವಿವರ ನೀಡಿದರು.
ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು, ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು.
ಕಿರಣನ ಪತ್ನಿ ಸಂಗೀತಳ ವಿಡಿಯೋ ಒಂದು ಸಂಪತ್ ಬಳಿ ಇದ್ದು ಇದನ್ನು ಇಟ್ಟುಕೊಂಡು ಆತ ಆಗಾಗ ಬ್ಲಾಕ್ಮೇಲ್ ಮಾಡುತ್ತಿದ್ದನು.
ಈ ಹಿಂದೆ ಸಂಗೀತಾ ಕೆಲವು ತಿಂಗಳುಗಳ ಕಾಲ ಸಂಪತ್ತೊಂದಿಗೆ ಬಾಳ್ವೆ ನಡೆಸುತ್ತಿದ್ದಳು. ನಂತರ ಪುನಹ ತನ್ನ ಮೊದಲ ಗಂಡ ಕಿರಣದೊಂದಿಗೆ ಬಾಳ್ವೆ ನಡೆಸುತ್ತಿದ್ದಾಳೆ.
ಆಕೆ ಪಡೆದುಕೊಂಡ 20 ಲಕ್ಷ ನೀಡದಿದ್ದಾಗ ಸಂಪತ್ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ಕುಪಿತರಾದ ಕಿರಣ್ ಹಾಗೂ ಸಂಗೀತಾ, ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಆತನನ್ನು ಬರಮಾಡಿಕೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಹೇಳಲಾಗಿದೆ.
ಗುತ್ತಿಗೆದಾರನಾದ ಸಂಪತ್ ನಾಯರ್ ಸ್ತಿಥಿವಂತುನೂ ಕೂಡ ಆಗಿದ್ದನು. ಕೆಲವೊಂದು ಕೆಟ್ಟಚಾಳಿಗೆ ಒಳಗಾಗಿ ತನ್ನ ಸ್ನೇಹಿತರಿಂದಲೆ ಕೊಲೆಯಾಗಿದ್ದಾನೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…