Categories: Crime

ಸಂಪತ್ ನಾಯರ್ ಕೊಲೆ ಪ್ರಕರಣ: ಕೊಲೆ‌ ಆರೋಪಿಗಳ ಬಂಧನ: ಇಷ್ಟಕ್ಕೂ ಸಂಪತ್ ನಾಯರ್ ಕೊಲೆ‌ಯಾಗಿದ್ದು‌ ಯಾರಿಂದ‌, ಏಕೆ…?

ಕೊಡಗಿನ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.10ರಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ  ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44) ಕಿರಣ್ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ.

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚುರೂಪಿಸಿದ ಆರೋಪಿ ಸಂಗೀತಾ, ಸಂಪತ್ ನಾಯರ್ ನನ್ನು ಸೋಮವಾರಪೇಟೆಯ ಹಾನಗಳ್ ಗೆ ಮೇ.9ರಂದು ರಂದು ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡು, ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಕೊವಿಯಿಂದ ಬೆದರಿಸಿ ದೊಣ್ಣೆಯಿಂದ, ಹೊಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.

ಕೊಲೆಯನ್ನು ಮರೆಮಾಚಲು ಮೃತ ದೇಹವನ್ನು, ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಮೃತ ದೇಹವನ್ನು ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಬೆಂಗಳೂರಿನಿಂದ ಬೇರೊಂದು ಕಾರನ್ನು ಈ ಕೃತ್ಯಕ್ಕಾಗಿ ಬಳಸಲು ತಂದಿದ್ದ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು.

ಮೇ.16 ರಂದು ಪೊಲೀಸರಿಗೆ ದೊರೆತ ಖಚಿತ ವರ್ತಮಾನದಲ್ಲಿ ಕಿರಣನನ್ನು ಬೆಂಗಳೂರಿನಲ್ಲಿ ಬಂಧಿಸಿ , ಆರೋಪಿ ಗಣಪತಿಯನ್ನು ಮೇ.17ರಂದು ಬೆಳ್ತಂಗಡಿಯಲ್ಲಿ ಬಂಧಿಸಿ, ಮೇ.18ರಂದು ಕಿರಣನ ಹೆಂಡತಿ ಸಂಗೀತಾಳನ್ನು ಸೋಮವಾರಪೇಟೆಯಲ್ಲಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ, ತಾವು ಮಾಡಿದ ಕೃತ್ಯವನ್ನು ಒಪ್ಪಿಕೊಂಡು ಘಟನೆಯ ಬಗ್ಗೆ ವಿವರ ನೀಡಿದ್ದಾರೆ.

ಈ ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನು ಕೂಡ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮರಾಜನ್ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಟನೆಯ ವಿವರ ನೀಡಿದರು.

ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು,  ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು.

ಕಿರಣನ ಪತ್ನಿ ಸಂಗೀತಳ ವಿಡಿಯೋ ಒಂದು ಸಂಪತ್ ಬಳಿ ಇದ್ದು ಇದನ್ನು ಇಟ್ಟುಕೊಂಡು ಆತ ಆಗಾಗ ಬ್ಲಾಕ್ಮೇಲ್ ಮಾಡುತ್ತಿದ್ದನು.

ಈ ಹಿಂದೆ ಸಂಗೀತಾ ಕೆಲವು ತಿಂಗಳುಗಳ ಕಾಲ ಸಂಪತ್ತೊಂದಿಗೆ ಬಾಳ್ವೆ ನಡೆಸುತ್ತಿದ್ದಳು. ನಂತರ ಪುನಹ ತನ್ನ ಮೊದಲ ಗಂಡ ಕಿರಣದೊಂದಿಗೆ ಬಾಳ್ವೆ ನಡೆಸುತ್ತಿದ್ದಾಳೆ.

ಆಕೆ ಪಡೆದುಕೊಂಡ 20 ಲಕ್ಷ ನೀಡದಿದ್ದಾಗ ಸಂಪತ್ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ಕುಪಿತರಾದ ಕಿರಣ್ ಹಾಗೂ ಸಂಗೀತಾ, ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಆತನನ್ನು ಬರಮಾಡಿಕೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಹೇಳಲಾಗಿದೆ.

ಗುತ್ತಿಗೆದಾರನಾದ ಸಂಪತ್ ನಾಯರ್ ಸ್ತಿಥಿವಂತುನೂ ಕೂಡ ಆಗಿದ್ದನು. ಕೆಲವೊಂದು ಕೆಟ್ಟಚಾಳಿಗೆ ಒಳಗಾಗಿ ತನ್ನ ಸ್ನೇಹಿತರಿಂದಲೆ ಕೊಲೆಯಾಗಿದ್ದಾನೆ.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

43 seconds ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

1 hour ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

2 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

3 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

14 hours ago