Categories: Crime

ಸಂಪತ್ ನಾಯರ್ ಕೊಲೆ ಪ್ರಕರಣ: ಕೊಲೆ‌ ಆರೋಪಿಗಳ ಬಂಧನ: ಇಷ್ಟಕ್ಕೂ ಸಂಪತ್ ನಾಯರ್ ಕೊಲೆ‌ಯಾಗಿದ್ದು‌ ಯಾರಿಂದ‌, ಏಕೆ…?

ಕೊಡಗಿನ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.10ರಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ  ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44) ಕಿರಣ್ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ.

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚುರೂಪಿಸಿದ ಆರೋಪಿ ಸಂಗೀತಾ, ಸಂಪತ್ ನಾಯರ್ ನನ್ನು ಸೋಮವಾರಪೇಟೆಯ ಹಾನಗಳ್ ಗೆ ಮೇ.9ರಂದು ರಂದು ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡು, ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಕೊವಿಯಿಂದ ಬೆದರಿಸಿ ದೊಣ್ಣೆಯಿಂದ, ಹೊಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.

ಕೊಲೆಯನ್ನು ಮರೆಮಾಚಲು ಮೃತ ದೇಹವನ್ನು, ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಮೃತ ದೇಹವನ್ನು ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಬೆಂಗಳೂರಿನಿಂದ ಬೇರೊಂದು ಕಾರನ್ನು ಈ ಕೃತ್ಯಕ್ಕಾಗಿ ಬಳಸಲು ತಂದಿದ್ದ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು.

ಮೇ.16 ರಂದು ಪೊಲೀಸರಿಗೆ ದೊರೆತ ಖಚಿತ ವರ್ತಮಾನದಲ್ಲಿ ಕಿರಣನನ್ನು ಬೆಂಗಳೂರಿನಲ್ಲಿ ಬಂಧಿಸಿ , ಆರೋಪಿ ಗಣಪತಿಯನ್ನು ಮೇ.17ರಂದು ಬೆಳ್ತಂಗಡಿಯಲ್ಲಿ ಬಂಧಿಸಿ, ಮೇ.18ರಂದು ಕಿರಣನ ಹೆಂಡತಿ ಸಂಗೀತಾಳನ್ನು ಸೋಮವಾರಪೇಟೆಯಲ್ಲಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ, ತಾವು ಮಾಡಿದ ಕೃತ್ಯವನ್ನು ಒಪ್ಪಿಕೊಂಡು ಘಟನೆಯ ಬಗ್ಗೆ ವಿವರ ನೀಡಿದ್ದಾರೆ.

ಈ ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನು ಕೂಡ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮರಾಜನ್ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಟನೆಯ ವಿವರ ನೀಡಿದರು.

ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು,  ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು.

ಕಿರಣನ ಪತ್ನಿ ಸಂಗೀತಳ ವಿಡಿಯೋ ಒಂದು ಸಂಪತ್ ಬಳಿ ಇದ್ದು ಇದನ್ನು ಇಟ್ಟುಕೊಂಡು ಆತ ಆಗಾಗ ಬ್ಲಾಕ್ಮೇಲ್ ಮಾಡುತ್ತಿದ್ದನು.

ಈ ಹಿಂದೆ ಸಂಗೀತಾ ಕೆಲವು ತಿಂಗಳುಗಳ ಕಾಲ ಸಂಪತ್ತೊಂದಿಗೆ ಬಾಳ್ವೆ ನಡೆಸುತ್ತಿದ್ದಳು. ನಂತರ ಪುನಹ ತನ್ನ ಮೊದಲ ಗಂಡ ಕಿರಣದೊಂದಿಗೆ ಬಾಳ್ವೆ ನಡೆಸುತ್ತಿದ್ದಾಳೆ.

ಆಕೆ ಪಡೆದುಕೊಂಡ 20 ಲಕ್ಷ ನೀಡದಿದ್ದಾಗ ಸಂಪತ್ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ಕುಪಿತರಾದ ಕಿರಣ್ ಹಾಗೂ ಸಂಗೀತಾ, ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಆತನನ್ನು ಬರಮಾಡಿಕೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಹೇಳಲಾಗಿದೆ.

ಗುತ್ತಿಗೆದಾರನಾದ ಸಂಪತ್ ನಾಯರ್ ಸ್ತಿಥಿವಂತುನೂ ಕೂಡ ಆಗಿದ್ದನು. ಕೆಲವೊಂದು ಕೆಟ್ಟಚಾಳಿಗೆ ಒಳಗಾಗಿ ತನ್ನ ಸ್ನೇಹಿತರಿಂದಲೆ ಕೊಲೆಯಾಗಿದ್ದಾನೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago