ಕೊಡಗಿನ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.10ರಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44) ಕಿರಣ್ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚುರೂಪಿಸಿದ ಆರೋಪಿ ಸಂಗೀತಾ, ಸಂಪತ್ ನಾಯರ್ ನನ್ನು ಸೋಮವಾರಪೇಟೆಯ ಹಾನಗಳ್ ಗೆ ಮೇ.9ರಂದು ರಂದು ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡು, ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಕೊವಿಯಿಂದ ಬೆದರಿಸಿ ದೊಣ್ಣೆಯಿಂದ, ಹೊಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.
ಕೊಲೆಯನ್ನು ಮರೆಮಾಚಲು ಮೃತ ದೇಹವನ್ನು, ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಮೃತ ದೇಹವನ್ನು ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಬೆಂಗಳೂರಿನಿಂದ ಬೇರೊಂದು ಕಾರನ್ನು ಈ ಕೃತ್ಯಕ್ಕಾಗಿ ಬಳಸಲು ತಂದಿದ್ದ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು.
ಮೇ.16 ರಂದು ಪೊಲೀಸರಿಗೆ ದೊರೆತ ಖಚಿತ ವರ್ತಮಾನದಲ್ಲಿ ಕಿರಣನನ್ನು ಬೆಂಗಳೂರಿನಲ್ಲಿ ಬಂಧಿಸಿ , ಆರೋಪಿ ಗಣಪತಿಯನ್ನು ಮೇ.17ರಂದು ಬೆಳ್ತಂಗಡಿಯಲ್ಲಿ ಬಂಧಿಸಿ, ಮೇ.18ರಂದು ಕಿರಣನ ಹೆಂಡತಿ ಸಂಗೀತಾಳನ್ನು ಸೋಮವಾರಪೇಟೆಯಲ್ಲಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ, ತಾವು ಮಾಡಿದ ಕೃತ್ಯವನ್ನು ಒಪ್ಪಿಕೊಂಡು ಘಟನೆಯ ಬಗ್ಗೆ ವಿವರ ನೀಡಿದ್ದಾರೆ.
ಈ ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನು ಕೂಡ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮರಾಜನ್ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಟನೆಯ ವಿವರ ನೀಡಿದರು.
ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು, ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು.
ಕಿರಣನ ಪತ್ನಿ ಸಂಗೀತಳ ವಿಡಿಯೋ ಒಂದು ಸಂಪತ್ ಬಳಿ ಇದ್ದು ಇದನ್ನು ಇಟ್ಟುಕೊಂಡು ಆತ ಆಗಾಗ ಬ್ಲಾಕ್ಮೇಲ್ ಮಾಡುತ್ತಿದ್ದನು.
ಈ ಹಿಂದೆ ಸಂಗೀತಾ ಕೆಲವು ತಿಂಗಳುಗಳ ಕಾಲ ಸಂಪತ್ತೊಂದಿಗೆ ಬಾಳ್ವೆ ನಡೆಸುತ್ತಿದ್ದಳು. ನಂತರ ಪುನಹ ತನ್ನ ಮೊದಲ ಗಂಡ ಕಿರಣದೊಂದಿಗೆ ಬಾಳ್ವೆ ನಡೆಸುತ್ತಿದ್ದಾಳೆ.
ಆಕೆ ಪಡೆದುಕೊಂಡ 20 ಲಕ್ಷ ನೀಡದಿದ್ದಾಗ ಸಂಪತ್ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ಕುಪಿತರಾದ ಕಿರಣ್ ಹಾಗೂ ಸಂಗೀತಾ, ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಆತನನ್ನು ಬರಮಾಡಿಕೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಹೇಳಲಾಗಿದೆ.
ಗುತ್ತಿಗೆದಾರನಾದ ಸಂಪತ್ ನಾಯರ್ ಸ್ತಿಥಿವಂತುನೂ ಕೂಡ ಆಗಿದ್ದನು. ಕೆಲವೊಂದು ಕೆಟ್ಟಚಾಳಿಗೆ ಒಳಗಾಗಿ ತನ್ನ ಸ್ನೇಹಿತರಿಂದಲೆ ಕೊಲೆಯಾಗಿದ್ದಾನೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…