Categories: Crime

ಸಂಪತ್ ನಾಯರ್ ಕೊಲೆ ಪ್ರಕರಣ: ಕೊಲೆ‌ ಆರೋಪಿಗಳ ಬಂಧನ: ಇಷ್ಟಕ್ಕೂ ಸಂಪತ್ ನಾಯರ್ ಕೊಲೆ‌ಯಾಗಿದ್ದು‌ ಯಾರಿಂದ‌, ಏಕೆ…?

ಕೊಡಗಿನ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.10ರಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ  ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44) ಕಿರಣ್ ಪತ್ನಿ ಸಂಗೀತಾ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಬಂಧಿತ ಆರೋಪಿಗಳಾಗಿದ್ದಾರೆ.

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಸಂಚುರೂಪಿಸಿದ ಆರೋಪಿ ಸಂಗೀತಾ, ಸಂಪತ್ ನಾಯರ್ ನನ್ನು ಸೋಮವಾರಪೇಟೆಯ ಹಾನಗಳ್ ಗೆ ಮೇ.9ರಂದು ರಂದು ತಾನು ಪಡೆದ ಸಾಲವನ್ನು ವಾಪಸ್ ನೀಡುತ್ತೇನೆ ಎಂದು ಹೇಳಿ ಬರಮಾಡಿಕೊಂಡು, ತನ್ನ ಗಂಡ ಕಿರಣ್ ಹಾಗೂ ಸ್ನೇಹಿತ ಗಣಪತಿ ಕೊವಿಯಿಂದ ಬೆದರಿಸಿ ದೊಣ್ಣೆಯಿಂದ, ಹೊಡೆದು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.

ಕೊಲೆಯನ್ನು ಮರೆಮಾಚಲು ಮೃತ ದೇಹವನ್ನು, ಸಂಪತ್ ನಾಯರ್ ತಂದಿದ್ದ ಫಿಯೆಟ್ ಪುಂಟೋ ಕಾರಿನಲ್ಲಿ ಹಾಕಿಕೊಂಡು ಸಕಲೇಶಪುರ ತಾಲೂಕು ಒಳಗೂರು ಅರಣ್ಯದಲ್ಲಿ ಮೃತ ದೇಹವನ್ನು ಬಿಸಾಡಿ, ಕಾರನ್ನು ಕಲ್ಲಳ್ಳಿ ಬಳಿ ನಿಲ್ಲಿಸಿ ಬೆಂಗಳೂರಿನಿಂದ ಬೇರೊಂದು ಕಾರನ್ನು ಈ ಕೃತ್ಯಕ್ಕಾಗಿ ಬಳಸಲು ತಂದಿದ್ದ ಕಾರಿನಲ್ಲಿ ಬೆಂಗಳೂರಿಗೆ ತೆರಳಿದ್ದರು.

ಮೇ.16 ರಂದು ಪೊಲೀಸರಿಗೆ ದೊರೆತ ಖಚಿತ ವರ್ತಮಾನದಲ್ಲಿ ಕಿರಣನನ್ನು ಬೆಂಗಳೂರಿನಲ್ಲಿ ಬಂಧಿಸಿ , ಆರೋಪಿ ಗಣಪತಿಯನ್ನು ಮೇ.17ರಂದು ಬೆಳ್ತಂಗಡಿಯಲ್ಲಿ ಬಂಧಿಸಿ, ಮೇ.18ರಂದು ಕಿರಣನ ಹೆಂಡತಿ ಸಂಗೀತಾಳನ್ನು ಸೋಮವಾರಪೇಟೆಯಲ್ಲಿ ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ, ತಾವು ಮಾಡಿದ ಕೃತ್ಯವನ್ನು ಒಪ್ಪಿಕೊಂಡು ಘಟನೆಯ ಬಗ್ಗೆ ವಿವರ ನೀಡಿದ್ದಾರೆ.

ಈ ಈ ಸಂಬಂಧ ಕೃತ್ಯಕ್ಕೆ ಬಳಸಲಾದ ದೊಣ್ಣೆ ಕತ್ತಿ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ತಲೆಮರಿಸಿಕೊಳ್ಳಲು ಸಹಕರಿಸಿದ ಇತರರನ್ನು ಕೂಡ ಸದ್ಯದಲ್ಲೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಾದ ರಾಮರಾಜನ್ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘಟನೆಯ ವಿವರ ನೀಡಿದರು.

ಕಿರಣ್, ಗಣಪತಿ, ಸಂಪತ್ ನಾಯರ್ ಸ್ನೇಹಿತರಾಗಿದ್ದು,  ಮೂವರು, ಹಣಕಾಸು ವ್ಯವಹಾರದಲ್ಲಿ ಪಾಲುದಾರರಾಗಿದ್ದರು.

ಕಿರಣನ ಪತ್ನಿ ಸಂಗೀತಳ ವಿಡಿಯೋ ಒಂದು ಸಂಪತ್ ಬಳಿ ಇದ್ದು ಇದನ್ನು ಇಟ್ಟುಕೊಂಡು ಆತ ಆಗಾಗ ಬ್ಲಾಕ್ಮೇಲ್ ಮಾಡುತ್ತಿದ್ದನು.

ಈ ಹಿಂದೆ ಸಂಗೀತಾ ಕೆಲವು ತಿಂಗಳುಗಳ ಕಾಲ ಸಂಪತ್ತೊಂದಿಗೆ ಬಾಳ್ವೆ ನಡೆಸುತ್ತಿದ್ದಳು. ನಂತರ ಪುನಹ ತನ್ನ ಮೊದಲ ಗಂಡ ಕಿರಣದೊಂದಿಗೆ ಬಾಳ್ವೆ ನಡೆಸುತ್ತಿದ್ದಾಳೆ.

ಆಕೆ ಪಡೆದುಕೊಂಡ 20 ಲಕ್ಷ ನೀಡದಿದ್ದಾಗ ಸಂಪತ್ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ಕುಪಿತರಾದ ಕಿರಣ್ ಹಾಗೂ ಸಂಗೀತಾ, ಆಕೆಯ ಸಂಬಂಧಿ ಗಣಪತಿಯೊಂದಿಗೆ ಸೇರಿ ಸ್ಕೆಚ್ ಹಾಕಿ, ಆತನನ್ನು ಬರಮಾಡಿಕೊಂಡು ಈ ಕೃತ್ಯ ಎಸಿಗಿದ್ದಾರೆ ಎಂದು ಹೇಳಲಾಗಿದೆ.

ಗುತ್ತಿಗೆದಾರನಾದ ಸಂಪತ್ ನಾಯರ್ ಸ್ತಿಥಿವಂತುನೂ ಕೂಡ ಆಗಿದ್ದನು. ಕೆಲವೊಂದು ಕೆಟ್ಟಚಾಳಿಗೆ ಒಳಗಾಗಿ ತನ್ನ ಸ್ನೇಹಿತರಿಂದಲೆ ಕೊಲೆಯಾಗಿದ್ದಾನೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago