ಸರ್ಕಾರಿ ಅಧಿಕಾರಿಗಳು ನಮ್ಮ ಭೂಮಿಗೆ ಸರಿಯಾದ ಬೆಲೆ ಘೋಷಣೆ ಮಾಡದೆ ಫಲವತ್ತಾದ ನಮ್ಮ ಭೂಮಿಯನ್ನು ಕಸಿದು ಕೊಳ್ಳುತ್ತಿದ್ದಾರೆ, ಸಂಪರ್ಕ ರಸ್ತೆಯ ಹೆಸರಿನಲ್ಲಿ ಮೋಸ ನಡೆಯುತ್ತಿದೆ. ನಮ್ಮ ಭೂಮಿಗೆ ಸರಿಯಾದ ಬೆಲೆ ನೀಡಲು ಮನಸಿಲ್ಲದ ಅಧಿಕಾರಿಗಳು ಹಲವಾರು ಕಾರಣಗಳನ್ನು ಹೇಳಿ ಪಲಾಯನ ಮಾಡುತ್ತಿದ್ದಾರೆ. ರೈತರ ಗೋಳನ್ನು ಕೇಳುವವರಿಲ್ಲ ಎಂದು ರೈತ ಮುಖಂಡರಾದ ಆನಂದ್ ಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ, ಬೀರಸಂದ್ರ, ಬೈರದೆನಹಳ್ಳಿ, ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮಗಳಲ್ಲಿ 118-37ಗುಂಟೆ ವಿಸ್ತೀರ್ಣದ ಜಮೀನನ್ನು ಕೆ. ಐ. ಎ. ಡಿ. ಬಿ. ಕಾಯ್ದೆ ಅನ್ವಯ ಪರಿಹಾರ ನಿಗದಿಪಡಿಸಲು ನೆವಂಬರ್ 29 ರಂದು ನಡೆದ ಸಭೆಯ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಪರ ಇರಬೇಕಾದ ಅಧಿಕಾರಿಗಳು ರೈತರ ವಿರುದ್ಧ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಶೋಚನೀಯ ಸಂಗತಿ. ಸರಿಯಾದ ಬೆಲೆ ನೀಡದೇ ನಮ್ಮ ಭೂಮಿಯನ್ನು ಮಾರಾಟ ಮಾಡುವುದಿಲ್ಲ ಎಂದರು . ಸಾಕಷ್ಟು ಬಾರಿ ಬೆಂಗಳೂರು ಕೆ ಐ ಎ ಡಿ ಬಿ ಕಚೇರಿಗೆ ದಾಖಲೆಗಳೊಂದಿಗೆ ಪರಿಹಾರದ ಹಣವನ್ನು ಪಡೆಯಲು ಮನವಿ ಮಾಡಿಕೊಂಡಿದ್ದರೂ ಸಹ ಅಧಿಕಾರಿಗಳ ವಿಳಂಬ ಧೋರಣೆ ತೋರುತ್ತಿದ್ದಾರೆ. ರೈತರಿಗಾಗುತ್ತಿರುವ ನಷ್ಟದ ಬಗ್ಗೆ ಯೋಚಿಸದ ಅಧಿಕಾರಿಗಳು ರೈತರಿಗೆ ಇಲ್ಲ ಸಲ್ಲದ ದಾಖಲೆಗಳನ್ನು ತೆಗೆದುಕೊಂಡು ಬರುವಂತೆ ಕೇಳುತ್ತಿದ್ದಾರೆ. ಭೂ ಸ್ವಾಧೀನಕ್ಕೆ ಒಳಪಟ್ಟ ಜಾಮೀನುಗಳ ಮಾರುಕಟ್ಟೆ ಹೊರತುಪಡಿಸಿ ವಾಣಿಜ್ಯೇತರ ಉದ್ದೇಶಕ್ಕಾಗಿ ಒಂದು ಗುಂಟೆ ಜಮೀನು 30 ರಿಂದ 40 ಲಕ್ಷದ ವರೆಗೂ ಸಹ ಮಾರಾಟವಾಗುತ್ತಿದ್ದು ಸದರಿ ಗ್ರಾಮಗಳ ಜಮೀನಿಗೆ ಸರಿಯಾದ ಬೆಲೆ ನೀಡಬೇಕೆಂದು ಮನವಿ ಮಾಡಿದರು .
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ನಾಗರಾಜು, ಮಂಜುನಾಥ್, ನರಸಪ್ಪ ಮತ್ತಿತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…