ಸರ್ಕಾರಿ ಅಧಿಕಾರಿಗಳು ನಮ್ಮ ಭೂಮಿಗೆ ಸರಿಯಾದ ಬೆಲೆ ಘೋಷಣೆ ಮಾಡದೆ ಫಲವತ್ತಾದ ನಮ್ಮ ಭೂಮಿಯನ್ನು ಕಸಿದು ಕೊಳ್ಳುತ್ತಿದ್ದಾರೆ, ಸಂಪರ್ಕ ರಸ್ತೆಯ ಹೆಸರಿನಲ್ಲಿ ಮೋಸ ನಡೆಯುತ್ತಿದೆ. ನಮ್ಮ ಭೂಮಿಗೆ ಸರಿಯಾದ ಬೆಲೆ ನೀಡಲು ಮನಸಿಲ್ಲದ ಅಧಿಕಾರಿಗಳು ಹಲವಾರು ಕಾರಣಗಳನ್ನು ಹೇಳಿ ಪಲಾಯನ ಮಾಡುತ್ತಿದ್ದಾರೆ. ರೈತರ ಗೋಳನ್ನು ಕೇಳುವವರಿಲ್ಲ ಎಂದು ರೈತ ಮುಖಂಡರಾದ ಆನಂದ್ ಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ, ಬೀರಸಂದ್ರ, ಬೈರದೆನಹಳ್ಳಿ, ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮಗಳಲ್ಲಿ 118-37ಗುಂಟೆ ವಿಸ್ತೀರ್ಣದ ಜಮೀನನ್ನು ಕೆ. ಐ. ಎ. ಡಿ. ಬಿ. ಕಾಯ್ದೆ ಅನ್ವಯ ಪರಿಹಾರ ನಿಗದಿಪಡಿಸಲು ನೆವಂಬರ್ 29 ರಂದು ನಡೆದ ಸಭೆಯ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಪರ ಇರಬೇಕಾದ ಅಧಿಕಾರಿಗಳು ರೈತರ ವಿರುದ್ಧ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಶೋಚನೀಯ ಸಂಗತಿ. ಸರಿಯಾದ ಬೆಲೆ ನೀಡದೇ ನಮ್ಮ ಭೂಮಿಯನ್ನು ಮಾರಾಟ ಮಾಡುವುದಿಲ್ಲ ಎಂದರು . ಸಾಕಷ್ಟು ಬಾರಿ ಬೆಂಗಳೂರು ಕೆ ಐ ಎ ಡಿ ಬಿ ಕಚೇರಿಗೆ ದಾಖಲೆಗಳೊಂದಿಗೆ ಪರಿಹಾರದ ಹಣವನ್ನು ಪಡೆಯಲು ಮನವಿ ಮಾಡಿಕೊಂಡಿದ್ದರೂ ಸಹ ಅಧಿಕಾರಿಗಳ ವಿಳಂಬ ಧೋರಣೆ ತೋರುತ್ತಿದ್ದಾರೆ. ರೈತರಿಗಾಗುತ್ತಿರುವ ನಷ್ಟದ ಬಗ್ಗೆ ಯೋಚಿಸದ ಅಧಿಕಾರಿಗಳು ರೈತರಿಗೆ ಇಲ್ಲ ಸಲ್ಲದ ದಾಖಲೆಗಳನ್ನು ತೆಗೆದುಕೊಂಡು ಬರುವಂತೆ ಕೇಳುತ್ತಿದ್ದಾರೆ. ಭೂ ಸ್ವಾಧೀನಕ್ಕೆ ಒಳಪಟ್ಟ ಜಾಮೀನುಗಳ ಮಾರುಕಟ್ಟೆ ಹೊರತುಪಡಿಸಿ ವಾಣಿಜ್ಯೇತರ ಉದ್ದೇಶಕ್ಕಾಗಿ ಒಂದು ಗುಂಟೆ ಜಮೀನು 30 ರಿಂದ 40 ಲಕ್ಷದ ವರೆಗೂ ಸಹ ಮಾರಾಟವಾಗುತ್ತಿದ್ದು ಸದರಿ ಗ್ರಾಮಗಳ ಜಮೀನಿಗೆ ಸರಿಯಾದ ಬೆಲೆ ನೀಡಬೇಕೆಂದು ಮನವಿ ಮಾಡಿದರು .
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ನಾಗರಾಜು, ಮಂಜುನಾಥ್, ನರಸಪ್ಪ ಮತ್ತಿತರರು ಉಪಸ್ಥಿತರಿದ್ದರು.
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…