ಸರ್ಕಾರಿ ಅಧಿಕಾರಿಗಳು ನಮ್ಮ ಭೂಮಿಗೆ ಸರಿಯಾದ ಬೆಲೆ ಘೋಷಣೆ ಮಾಡದೆ ಫಲವತ್ತಾದ ನಮ್ಮ ಭೂಮಿಯನ್ನು ಕಸಿದು ಕೊಳ್ಳುತ್ತಿದ್ದಾರೆ, ಸಂಪರ್ಕ ರಸ್ತೆಯ ಹೆಸರಿನಲ್ಲಿ ಮೋಸ ನಡೆಯುತ್ತಿದೆ. ನಮ್ಮ ಭೂಮಿಗೆ ಸರಿಯಾದ ಬೆಲೆ ನೀಡಲು ಮನಸಿಲ್ಲದ ಅಧಿಕಾರಿಗಳು ಹಲವಾರು ಕಾರಣಗಳನ್ನು ಹೇಳಿ ಪಲಾಯನ ಮಾಡುತ್ತಿದ್ದಾರೆ. ರೈತರ ಗೋಳನ್ನು ಕೇಳುವವರಿಲ್ಲ ಎಂದು ರೈತ ಮುಖಂಡರಾದ ಆನಂದ್ ಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ, ಬೀರಸಂದ್ರ, ಬೈರದೆನಹಳ್ಳಿ, ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮಗಳಲ್ಲಿ 118-37ಗುಂಟೆ ವಿಸ್ತೀರ್ಣದ ಜಮೀನನ್ನು ಕೆ. ಐ. ಎ. ಡಿ. ಬಿ. ಕಾಯ್ದೆ ಅನ್ವಯ ಪರಿಹಾರ ನಿಗದಿಪಡಿಸಲು ನೆವಂಬರ್ 29 ರಂದು ನಡೆದ ಸಭೆಯ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಪರ ಇರಬೇಕಾದ ಅಧಿಕಾರಿಗಳು ರೈತರ ವಿರುದ್ಧ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಶೋಚನೀಯ ಸಂಗತಿ. ಸರಿಯಾದ ಬೆಲೆ ನೀಡದೇ ನಮ್ಮ ಭೂಮಿಯನ್ನು ಮಾರಾಟ ಮಾಡುವುದಿಲ್ಲ ಎಂದರು . ಸಾಕಷ್ಟು ಬಾರಿ ಬೆಂಗಳೂರು ಕೆ ಐ ಎ ಡಿ ಬಿ ಕಚೇರಿಗೆ ದಾಖಲೆಗಳೊಂದಿಗೆ ಪರಿಹಾರದ ಹಣವನ್ನು ಪಡೆಯಲು ಮನವಿ ಮಾಡಿಕೊಂಡಿದ್ದರೂ ಸಹ ಅಧಿಕಾರಿಗಳ ವಿಳಂಬ ಧೋರಣೆ ತೋರುತ್ತಿದ್ದಾರೆ. ರೈತರಿಗಾಗುತ್ತಿರುವ ನಷ್ಟದ ಬಗ್ಗೆ ಯೋಚಿಸದ ಅಧಿಕಾರಿಗಳು ರೈತರಿಗೆ ಇಲ್ಲ ಸಲ್ಲದ ದಾಖಲೆಗಳನ್ನು ತೆಗೆದುಕೊಂಡು ಬರುವಂತೆ ಕೇಳುತ್ತಿದ್ದಾರೆ. ಭೂ ಸ್ವಾಧೀನಕ್ಕೆ ಒಳಪಟ್ಟ ಜಾಮೀನುಗಳ ಮಾರುಕಟ್ಟೆ ಹೊರತುಪಡಿಸಿ ವಾಣಿಜ್ಯೇತರ ಉದ್ದೇಶಕ್ಕಾಗಿ ಒಂದು ಗುಂಟೆ ಜಮೀನು 30 ರಿಂದ 40 ಲಕ್ಷದ ವರೆಗೂ ಸಹ ಮಾರಾಟವಾಗುತ್ತಿದ್ದು ಸದರಿ ಗ್ರಾಮಗಳ ಜಮೀನಿಗೆ ಸರಿಯಾದ ಬೆಲೆ ನೀಡಬೇಕೆಂದು ಮನವಿ ಮಾಡಿದರು .
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ನಾಗರಾಜು, ಮಂಜುನಾಥ್, ನರಸಪ್ಪ ಮತ್ತಿತರರು ಉಪಸ್ಥಿತರಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…