ಸಂಪರ್ಕ ರಸ್ತೆಯ ಹೆಸರಿನಲ್ಲಿ ನಿಖರ ಬೆಲೆ ನಿಗದಿ ಮಾಡದೇ ಫಲವತ್ತಾದ ಭೂಮಿ ಕಬಳಿಸುವ ಯತ್ನ- ರೈತ ಮುಖಂಡ ಆನಂದ್ ಮೂರ್ತಿ

ಸರ್ಕಾರಿ ಅಧಿಕಾರಿಗಳು ನಮ್ಮ ಭೂಮಿಗೆ ಸರಿಯಾದ ಬೆಲೆ ಘೋಷಣೆ ಮಾಡದೆ ಫಲವತ್ತಾದ ನಮ್ಮ ಭೂಮಿಯನ್ನು ಕಸಿದು ಕೊಳ್ಳುತ್ತಿದ್ದಾರೆ, ಸಂಪರ್ಕ ರಸ್ತೆಯ ಹೆಸರಿನಲ್ಲಿ ಮೋಸ ನಡೆಯುತ್ತಿದೆ. ನಮ್ಮ ಭೂಮಿಗೆ ಸರಿಯಾದ ಬೆಲೆ ನೀಡಲು ಮನಸಿಲ್ಲದ ಅಧಿಕಾರಿಗಳು ಹಲವಾರು ಕಾರಣಗಳನ್ನು ಹೇಳಿ ಪಲಾಯನ ಮಾಡುತ್ತಿದ್ದಾರೆ. ರೈತರ ಗೋಳನ್ನು ಕೇಳುವವರಿಲ್ಲ ಎಂದು ರೈತ ಮುಖಂಡರಾದ ಆನಂದ್ ಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರವಾಸಿ ಮಂದಿರದಲ್ಲಿ ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ, ಬೀರಸಂದ್ರ, ಬೈರದೆನಹಳ್ಳಿ, ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮಗಳಲ್ಲಿ 118-37ಗುಂಟೆ ವಿಸ್ತೀರ್ಣದ ಜಮೀನನ್ನು ಕೆ. ಐ. ಎ. ಡಿ. ಬಿ. ಕಾಯ್ದೆ ಅನ್ವಯ ಪರಿಹಾರ ನಿಗದಿಪಡಿಸಲು ನೆವಂಬರ್ 29 ರಂದು ನಡೆದ ಸಭೆಯ ಬಗ್ಗೆ ರೈತರು ಅಸಮಾಧಾನ ವ್ಯಕ್ತಪಡಿಸಿದರು.

ರೈತರ ಪರ ಇರಬೇಕಾದ ಅಧಿಕಾರಿಗಳು ರೈತರ ವಿರುದ್ಧ ಕಾರ್ಯ ನಿರ್ವಹಣೆ ಮಾಡುತ್ತಿರುವುದು ಶೋಚನೀಯ ಸಂಗತಿ. ಸರಿಯಾದ ಬೆಲೆ ನೀಡದೇ ನಮ್ಮ ಭೂಮಿಯನ್ನು ಮಾರಾಟ ಮಾಡುವುದಿಲ್ಲ ಎಂದರು . ಸಾಕಷ್ಟು ಬಾರಿ ಬೆಂಗಳೂರು ಕೆ ಐ ಎ ಡಿ ಬಿ ಕಚೇರಿಗೆ ದಾಖಲೆಗಳೊಂದಿಗೆ ಪರಿಹಾರದ ಹಣವನ್ನು ಪಡೆಯಲು ಮನವಿ ಮಾಡಿಕೊಂಡಿದ್ದರೂ ಸಹ ಅಧಿಕಾರಿಗಳ ವಿಳಂಬ ಧೋರಣೆ ತೋರುತ್ತಿದ್ದಾರೆ. ರೈತರಿಗಾಗುತ್ತಿರುವ ನಷ್ಟದ ಬಗ್ಗೆ ಯೋಚಿಸದ ಅಧಿಕಾರಿಗಳು ರೈತರಿಗೆ ಇಲ್ಲ ಸಲ್ಲದ ದಾಖಲೆಗಳನ್ನು ತೆಗೆದುಕೊಂಡು ಬರುವಂತೆ ಕೇಳುತ್ತಿದ್ದಾರೆ. ಭೂ ಸ್ವಾಧೀನಕ್ಕೆ ಒಳಪಟ್ಟ ಜಾಮೀನುಗಳ ಮಾರುಕಟ್ಟೆ ಹೊರತುಪಡಿಸಿ ವಾಣಿಜ್ಯೇತರ ಉದ್ದೇಶಕ್ಕಾಗಿ ಒಂದು ಗುಂಟೆ ಜಮೀನು 30 ರಿಂದ 40 ಲಕ್ಷದ ವರೆಗೂ ಸಹ ಮಾರಾಟವಾಗುತ್ತಿದ್ದು ಸದರಿ ಗ್ರಾಮಗಳ ಜಮೀನಿಗೆ ಸರಿಯಾದ ಬೆಲೆ ನೀಡಬೇಕೆಂದು ಮನವಿ ಮಾಡಿದರು .

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ನಾಗರಾಜು, ಮಂಜುನಾಥ್, ನರಸಪ್ಪ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

3 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

3 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

7 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

8 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

14 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

15 hours ago